ಕೊಲ್ಲೂರು: ಸುಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ್ ಮತ್ತು ಹಾಸ್ಯನಟ ಚಿಕ್ಕಣ್ಣ ಮತ್ತವರ ಸ್ನೇಹಿತರು ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇವಸ್ಥಾನದಲ್ಲಿ ನಡೆದ ನವಚಂಡಿಕಾ ಯಾಗದಲ್ಲಿ ಪಾಲ್ಗೊಂಡ ಅವರು, ಬಳಿಕ ದೇವಿಯ ದರ್ಶನ ಪಡೆದರು. ದೇವಳದ ಟ್ರಸ್ಟಿಗಳಾದ ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಟರನ್ನು ಗೌರವಿಸಿದರು.