ಉಡುಪಿ : ಬ್ರಹ್ಮಾವರ ತಾಲೂಕಿನ ಕೋಟತಟ್ಟು ಬಾರಿಕೆರೆ ಕೊರಗ ಕಾಲನಿಯ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಘಟನೆಯನ್ನು ಸಿಒಡಿ ತನಿಖೆಗೆ ಆದೇಶ ನೀಡಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಕೋಟದ ಕೊರಗರ ಕಾಲನಿಗೆ ಗೃಹ ಸಚಿವರು ಇಂದು ಭೇಟಿ ನೀಡಿದ್ದಾರೆ. ಲಾಠಿಚಾರ್ಜ್ ನಿಂದ ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಅದರಲ್ಲಿ 6 ಕುಟುಂಬಗಳಿಗೆ 50 ಸಾವಿರ ರೂ. ಚೆಕ್ ವಿತರಿಸಿದರು ಮತ್ತು ಅವರ ವಿರುದ್ಧ ದಾಖಲಾದ ಕೇಸ್ ಅನ್ನು ಸರಕಾರದ ಮುಖಾಂತರ ವಾಪಸ್ ಪಡೆಯಲು ಕ್ರಮ ಜರುಗಿಸುವುದಾಗಿ ಅವರು ಭರವಸೆ ನೀಡಿದರು.