ಉಡುಪಿ : ಹೆಲಿಕಾಪ್ಟರ್ ದುರಂತದಲ್ಲಿ ದೇಶದ ಸೇನಾಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ ನಿಧನರಾಗಿದ್ದು, ಹೆಲಿಕಾಪ್ಟರ್ ಪತನದ ಬಗ್ಗೆ ಗಂಭೀರವಾದ ತನಿಖೆ ನಡೆಸಬೇಕು ಎಂದು ಉಡುಪಿಯಲ್ಲಿ ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದರು.
ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿ ತನಿಖೆಯಾಗಬೇಕು. ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಮಾತ್ರ ಪ್ರಯೋಜನವಿಲ್ಲ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೂಲಕ ತನಿಖೆಗೆ ಆಗ್ರಹಿಸಿದರು. ದುರಂತದ ಬಗ್ಗೆ ಪ್ರಧಾನಿ ಜನರಿಗೆ ಸೂಕ್ತ ಮಾಹಿತಿ ನೀಡಬೇಕು. ದೇಶದ ಸುರಕ್ಷತೆ ದೃಷ್ಟಿಯಿಂದ ಇದೊಂದು ಗಂಭೀರ ಎಚ್ಚರಿಕೆ ಎಂದರು.