News Kannada
Thursday, March 30 2023

ಉಡುಪಿ

ಜಾತ್ರೋತ್ಸವಕ್ಕೆ ಶುಭ ಕೋರುವ ಫ್ಲೆಕ್ಸ್ ಅಳವಡಿಕೆ ವೇಳೆ ವಿದ್ಯುತ್ ತಗುಲಿ ಯುವಕ ಮೃತ್ಯು

Photo Credit : News Kannada

ಕುಂದಾಪುರ:  ಕುಂದಾಪುರ ತಾಲೂಕಿನ ಸೌಕೂರಿನಲ್ಲಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಶುಭ ಕೋರುವ ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ಫ್ಲೆಕ್ಸ್‌ಗೆ ವಿದ್ಯುತ್‌ ತಂತಿಗೆ ತಗುಲಿದ್ದರಿಂದ ಯುವಕನೋರ್ವ ಮೃತಪಟ್ಟ ಘಟನೆ  ಶುಕ್ರವಾರ ರಾತ್ರಿ ಸಂಭವಿಸಿದೆ.

ಘಟನೆಯಲ್ಲಿ ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಸೌಕೂರು ನಿವಾಸಿ ಪ್ರಶಾಂತ ದೇವಾಡಿಗ(26) ಮೃತಪಟ್ಟ ಯುವಕ. ಅವಘಡದಲ್ಲಿ ಶ್ರೀಧರ ದೇವಾಡಿಗ(45) ಎಂಬವರು ಗಂಭೀರ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಆಯೋಜಿಸಲಾಗಿತ್ತು. ಆ ಪ್ರಯುಕ್ತ ಶುಕ್ರವಾರ ರಾತ್ರಿ ಜಾತ್ರೋತ್ಸವಕ್ಕೆ ಶುಭಕೋರುವ ಬ್ಯಾನರ್‌ ಅಳವಡಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪ್ಲೆಕ್ಸ್‌ ಅಳವಡಿಸುತ್ತಿದ್ದ ಸ್ಥಳದ ಸಮೀಪವೇ ವಿದ್ಯುತ್ ತಂತಿ ಹಾದು ಹೋಗಿದ್ದು, ಅದನ್ನು ಗಮನಿಸದೆ ಫ್ಲೆಕ್ಸ್‌ ಮೇಲಕ್ಕೆತ್ತಿ ಕಟ್ಟುತ್ತಿದ್ದ ವೇಳೆ ಅದು ವಿದ್ಯುತ್‌ ತಂತಿಗೆ ತಗುಲಿದೆ. ಇದರಿಂದ ಪ್ರಶಾಂತ ದೇವಾಡಿಗ ಹಾಗೂ ಶ್ರೀಧರ ದೇವಾಡಿಗ ವಿದ್ಯುತ್ ಆಘಾತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡರೆನ್ನಲಾಗಿದೆ. ಕೂಡಲೇ ಇಬ್ಬರನ್ನು ರಕ್ಷಿಸುವ ಪ್ರಯತ್ನ ನಡೆಸಲಾಯಿತಾದರೂ ಅಷ್ಟರಲ್ಲಾಗಲೇ ಪ್ರಶಾಂತ ದೇವಾಡಿಗ ಕೊನೆಯುಸಿರೆಳೆದಿದ್ದರು.

See also  ಅಲಾಸ್ಕಾದಲ್ಲಿ ವಿಮಾನ ಪತನ: ಪೈಲೆಟ್‌ ಸೇರಿದಂತೆ ಆರು ಮಂದಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು