News Kannada
Monday, September 25 2023
ಉಡುಪಿ

ಕಾಂತಾವರ: ಪ್ರತಿಯೊಬ್ಬ ನಾಯಕನೂ ಧೈರ್ಯವಂತನಾಗಿರಬೇಕು- ಡಾ. ರಾಕಿ ಆಂಟೋನಿ ಮಥಾಯ್

Every leader should be brave- Dr. Rocky Antony Mathai
Photo Credit : News Kannada

ಕಾಂತಾವರ: ಆಗಸ್ಟ್ 11 ರಂದು ಪ್ರಕೃತಿ ವಿದ್ಯಾ ಸಮೂಹ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಮತ್ತು ಮತದಾನದ ಅರಿವು ಮೂಡಿಸುವ ಉದ್ದೇಶದಿಂದ ಪ್ರಜಾಪ್ರಭುತ್ವ ಮಾದರಿಯ ಚುನಾವಣೆಯನ್ನು ನಡೆಸಿ , ಅದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಗ್ರಹಣ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಗಳಾಗಿ ಆಗಮಿಸಿದ ಡಾ ರಾಕಿ ಆಂಟೋನಿ ಮಥಾಯ್ ಅವರು ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸ್ವತಂತ್ರ ಭಾರತದಲ್ಲಿ ನಾಯಕತ್ವದ ಮಹತ್ವದ ಕುರಿತು ವಿವರಿಸುತ್ತಾ , ಪ್ರತ್ಯಕ್ಷ ಅನುಭವದ ಮೂಲಕ ಪ್ರಜಾಪ್ರಭುತ್ವದ ಅರಿವನ್ನು ಮೂಡಿಸುವುದು ಅತ್ಯಗತ್ಯ ಎಂದು ಹೇಳುವುದರ ಜೊತೆಗೆ ಚುನಾವಣೆಯಲ್ಲಿ ಭಾಗವಹಿಸಿ ಸರ್ವಾನುಮತದಿಂದ ಆಯ್ಕೆ ಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಬ್ಯಾಡ್ಜ್ ಗಳು ಮತ್ತು ಕವಚಗಳನ್ನು ಹಾಕಿ ಅಭಿನಂದಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಅಶೋಕ ಕುಮಾರ ರವರು ಉಪಸ್ಥಿತರಿದ್ದರು. ಪಿಯುಸಿ ಪ್ರಭಾರ ಪ್ರಾಂಶುಪಾಲರಾದ ಕುಮಾರಿ ವಿನ್ಯಾ ರವರು ಪದಗ್ರಹಣ ಪಡೆದ ಎಲ್ಲಾ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಪ್ರತಿನಿಧಿಗಳು ತಮಗೆ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುತ್ತೇವೆ ಎಂದು ಪ್ರಮಾಣ ವಚನ ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಪ್ರಾಂಶುಪಾಲರಾದ ಶ್ರೀ ಪ್ರಸಾದ ರವರು ತಂಡದ ನಾಯಕ , ನಾಯಕಿಗೆ ಬ್ಯಾಡ್ಜ್ ಮತ್ತು ಕವಚಗಳನ್ನು ನೀಡಿ ಅಭಿನಂದಿಸಿದರು . ಹತ್ತನೆಯ ತರಗತಿ ವಿದ್ಯಾರ್ಥಗಳಾದ ಆದಿತ್ಯ ಉದಯ ಪೂಜಾರಿ ಕಾರ್ಯಕ್ರಮದ ನಿರೂಪಣೆಯನ್ನು, ಹೇಮಂತ್ ಗೌಡ ರವರು ಎಲ್ಲರಿಗೂ ವಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕ ವರ್ಗದವರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

See also  ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಜೈನ್ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು