News Kannada
Wednesday, December 06 2023
ಉಡುಪಿ

ಉಡುಪಿ: ಕೃಷಿ ಉತ್ಪನ್ನ ರಪ್ತಿಗೆ ಆದ್ಯತೆ ನೀಡಬೇಕು ಎಂದ ಶೋಭಾ ಕರಂದ್ಲಾಜೆ

Prime Minister Narendra Modi has kept his promise of providing jobs to the youth.
Photo Credit :

ಉಡುಪಿ: ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಸ್ಥಳೀಯ ಉತ್ಪನ್ನಗಳನ್ನು ಜಾಗತಿಕ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ರಪ್ತಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕೃಷಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಬುದ್ಧಿಶಕ್ತಿಯನ್ನು ಬಳಸಿ ಈ ನಿಟ್ಟಿನಲ್ಲಿ ಹೊಸತನ ಕಂಡುಕೊಳ್ಳಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ, ಲಘು ಉದ್ಯೋಗ ಭಾರತಿ-ಕರ್ನಾಟಕ, ಐಎಂಎಫ್ ಫೌಂಡೇಶನ್ ವತಿಯಿಂದ ಅಕ್ಟೋಬರ್ 14 ರಂದು ಇಲ್ಲಿನ ಕಿದಿಯೂರು ಹೋಟೆಲ್‌ನ ಶೇಷಶಯನ ಆಡಿಟೋರಿಯಂನಲ್ಲಿ  ಆಯೋಜಿಸಿದ್ದ ರಫ್ತುದಾರರ ಸಮಾವೇಶ ಮತ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರಾವಳಿ ಕರ್ನಾಟಕದಲ್ಲಿ ಉತ್ಪನ್ನಗಳನ್ನು (ಮೀನು) ಹೆಚ್ಚಿನ ಪ್ರಮಾಣದಲ್ಲಿ ಮಾಡಲಾಗುತ್ತದೆ. ಆದರೆ ನೆರೆಯ ಕೇರಳದ ಮೂಲಕ ಹೊರ ದೇಶಗಳಿಗೆ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತದೆ. ಕನಿಷ್ಠ ಪಿಪಿಪಿ ಮಾದರಿಯಲ್ಲಾದರೂ ರಾಜ್ಯದಿಂದ ರಫ್ತು ಮಾಡಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಸಾಗರ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ವಿಶೇಷ ಸಮ್ಮೇಳನ ನಡೆಸಬೇಕು ಎಂದು ಹೇಳಿದರು. ರೈತರ ಆತ್ಮಹತ್ಯೆ ತಡೆಯಲು ಕೃಷಿ ಉತ್ಪನ್ನಗಳ ಬ್ಯಾಂಡಿಂಗ್, ಸಂಸ್ಕರಣೆ ಮತ್ತು ಮಾರುಕಟ್ಟೆ ಅತ್ಯಗತ್ಯ. ಅನೇಕ ರೈತರಿಗೆ ತಮ್ಮ ಬೆಳೆಗಳಿಗೆ ಮಾರುಕಟ್ಟೆಯನ್ನು ಹೇಗೆ ಸೃಷ್ಟಿಸುವುದು ಎಂದು ತಿಳಿದಿಲ್ಲ. ಮಾರುಕಟ್ಟೆ ವ್ಯವಸ್ಥೆಯಾಗುವಂತೆ ನಾವು ರಫ್ತುಗಳನ್ನು ಹೆಚ್ಚಿಸಬೇಕಾಗಿದೆ ಎಂದು ಅವರು ಹೇಳಿದರು.

2023 ಅನ್ನು ಅಂತಾರಾಷ್ಟ್ರೀಯ ರಾಗಿ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು, ಸಿರಿ ಧಾನ್ಯದ ಬಗ್ಗೆ ಎಲ್ಲರಲ್ಲೂ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

See also  ಬೃಹತ್ ಚಿನ್ನ ಕಳವು ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು