News Kannada
Thursday, October 05 2023
ಉಡುಪಿ

ಉಡುಪಿ: ನಕ್ರೆಯಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಸಾವು

Car catches fire during match promotional event
Photo Credit : Freepik

ಉಡುಪಿ: ಜಿಲ್ಲೆಯ ನಕ್ರೆಯಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಮೃತರನ್ನು ಸುಬ್ರಹ್ಮಣ್ಯ (46) ಎಂದು ಗುರುತಿಸಲಾಗಿದೆ. ಸ್ಥಳದ ಕಡೆಗೆ ಬರುತ್ತಿದ್ದಾಗ ನಕ್ರೆ ಜಂಕ್ಷನ್‌ನಲ್ಲಿ ಬೈಕ್ ನಿಯಂತ್ರಣ ತಪ್ಪಿದೆ. ಈ ವೇಳೆ ಬೈಕ್‌ನಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಈತ ಹೆಲ್ಮೆಟ್ ಧರಿಸಿರಲಿಲ್ಲ ಎಂದು ತಿಳಿದು ಬಂದಿದೆ.

ಅವರ ಸಂಬಂಧಿ ವಿಶ್ವನಾಥ್ ಕೂಡ ಎದುರುಗಡೆಯಿಂದ ಬೈಕ್ ನಲ್ಲಿ ಹೋಗುತ್ತಿದ್ದರು. ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಸಿಟಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಆಸ್ಪತ್ರೆಯ ವೈದ್ಯರು ಆತನನ್ನು ಪರೀಕ್ಷಿಸಿ ಸಾವು ದೃಢಪಡಿಸಿದರು.

ಈ ಕುರಿತು ಕಾರ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಕಾರ್ಕಳದಲ್ಲಿ 4 ಅಡಿ ಎತ್ತರದ ಜೋಡಿಯ ಮದುವೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು