News Kannada
Monday, September 25 2023
ಉಡುಪಿ

ಉಡುಪಿ: ಗಂಗೊಳ್ಳಿಯಲ್ಲಿ ಬೋಟ್ ನಿಂದ ನದಿಗೆ ಬಿದ್ದು ಮೀನುಗಾರ ಸಾವು

Udupi: Fisherman dies after falling into river from boat in Gangolli
Photo Credit : News Kannada

ಉಡುಪಿ: ಬೋಟ್ ನಿಂದ ಮೀನು ಖಾಲಿ ಮಾಡುತ್ತಿದ್ದ ವೇಳೆ ಮೀನುಗಾರನೋರ್ವ ಆಯತಪ್ಪಿ ನದಿಯ ನೀರಿಗೆ ಬಿದ್ದು ಮೃತಪಟ್ಟ ಘಟನೆ ಗಂಗೊಳ್ಳಿ ಬಂದರಿನ ಪಂಚಗಂಗಾವಳಿ ನದಿಯಲ್ಲಿ ನಡೆದಿದೆ.

ಮೃತ ಮೀನುಗಾರನನ್ನು ಒರಿಸ್ಸಾ ಮೂಲದ 32ವರ್ಷದ ಪ್ರಮೋದ ಮಿನ್ಜ್‌ ಎಂದು ಗುರುತಿಸಲಾಗಿದೆ. ಇವರು ಯಕ್ಷೇಶ್ವರಿ” ಬೋಟ್ ನಲ್ಲಿ ಮೀನುಗಾರನಾಗಿ ಕೆಲಸ ಮಾಡಿಕೊಂಡಿದ್ದರು. ಅದರಂತೆ ನ.30ರಂದು ಆಳಸಮುದ್ರ ಮೀನುಗಾರಿಕೆ ಮುಗಿಸಿಕೊಂಡು ಗಂಗೊಳ್ಳಿ ಬಂದರ ಬಳಿ ಪಂಚಗಂಗಾವಳಿ ನದಿಯಲ್ಲಿ ಬೋಟನ್ನು ನಿಲ್ಲಿಸಿ, ಬೋಟಿನಿಂದ ಮೀನನ್ನು ಖಾಲಿ ಮಾಡಲಾಗುತ್ತಿತ್ತು.

ಈ ವೇಳೆ ಪ್ರಮೋದ್ ಆಕಸ್ಮಿಕವಾಗಿ ಆಯಾತಪ್ಪಿ ಬೋಟ್‌ನಿಂದ ನದಿಯ ನೀರಿಗೆ ಬಿದ್ದು ಕಾಣೆಯಾಗಿದ್ದರು. ಇಂದು ಬೆಳಿಗ್ಗೆ ನದಿಯಲ್ಲಿ ಪ್ರಮೋದ್ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಮಂಗಳೂರು: 25ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ‘ಇಂಪೆಟಸ್ 2022’
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು