News Kannada
Sunday, September 24 2023
ಉಡುಪಿ

ಉಡುಪಿ: ಡಿ.3 ಮತ್ತು‌ 4ಕ್ಕೆ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟ- ಸಂತೋಷ್ ಸುವರ್ಣ

Udupi: Santhosh Suvarna – National Level Karate Competition on Dec.3 and 4
Photo Credit : News Kannada

ಉಡುಪಿ: ಕುಬುಡೋ ಬುಡೋಕಾನ್ ಕರಾಟೆ ಡೋ ಅಸೋಸಿಯೆಶನ್ ಕರ್ನಾಟಕ ವತಿಯಿಂದ 5ನೇ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ ‘ಕೆಬಿಕೆ ಕಪ್-2022’ ಇದೇ ಬರುವ ಡಿ. 3ಮತ್ತು 4ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಸ್ಪರ್ಧಾಕೂಟದ ಸಂಘಟಕ ಸಂತೋಷ್ ಸುವರ್ಣ ಬೊಳ್ಜೆ ಈ ಬಗ್ಗೆ ಮಾಹಿತಿ‌ ನೀಡಿದರು. ಡಿ.3ರ ಬೆಳಿಗ್ಗೆ 9 ಗಂಟೆಗೆ ಶಾಸಕ ರಘುಪತಿ ಭಟ್ ಕರಾಟೆ ಸ್ಪರ್ಧಾಕೂಟವನ್ನು ಉದ್ಘಾಟಿಸಲಿದ್ದಾರೆ. ಅಂಬಲಪಾಡಿ ದೇಗುಲದ ಧರ್ಮದರ್ಶಿ ಡಾ ನಿ. ಬೀ. ವಿಜಯ ಬಲ್ಲಾಳ್ ಆಶೀರ್ವಚನ ನೀಡಲಿದ್ದಾರೆ. ಡಿ.4ರಂದು ಸಂಜೆ 6ಕ್ಕೆ ನಡೆಯುವ ಸಮರೋಪದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭಾಗವಹಿಸಲಿದ್ದಾರೆ ಎಂದರು.

ಈ ಸ್ಪರ್ಧಾಕೂಟದಲ್ಲಿ ಕರ್ನಾಟಕದ ವಿವಿಧ ಜಿಲ್ಲೆ ಸಹಿತ ಆಂಧ್ರಪ್ರದೇಶ, ಅಸ್ಸಾಂ, ಗೋವಾ, ತೆಲಂಗಾಣ ಸೇರಿದಂತೆ 10 ರಾಜ್ಯಗಳಿಂದ 2 ಸಾವಿರ ಕರಾಟೆಪಟುಗಳು ಭಾಗವಹಿಸಲಿದ್ದಾರೆ. 6ರಿಂದ 20ವರ್ಷ ಹಾಗೂ ಮೇಲ್ಪಟ್ಟ ವಯೋಮಾನದದಲ್ಲಿ ವಿವಿಧ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸ್ಪರ್ಧಾಕೂಟದ ಮುಖ್ಯ ಮಾರ್ಗದರ್ಶಕ ರವಿಕುಮಾರ್ ಉದ್ಯಾವರ, ಪ್ರಮುಖರಾದ ನಿಶಾಂತ್ ಭಟ್‌, ಸೂರಜ್ ಕುಮಾರ್, ಅಮೃತಾ ಸದಾನಂದ್, ಅಕಾಂಕ್ಷ, ಫೈಸಲ್, ರವೀಂದ್ರ ಇದ್ದರು.

See also  ಉಡುಪಿ: ಕುಂದಾಪುರ, ಕಾರ್ಕಳದಲ್ಲಿ ಕರ್ಫ್ಯೂ ಗೆ ಉತ್ತಮ ಸ್ಪಂದನೆ; ಜನಸಂಚಾರ ವಿರಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು