News Kannada
Friday, September 29 2023
ಉಡುಪಿ

ಉಡುಪಿ: ಪೆರ್ಡೂರಿನಲ್ಲಿ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 8ನೇ ಶಾಖೆ ಉದ್ಘಾಟನೆ

Udupi: 8th branch of Rajapura Saraswat Credit Co-operative Society inaugurated at Perdur
Photo Credit : News Kannada

ಉಡುಪಿ: ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ 8ನೇ ಶಾಖೆ ಉಡುಪಿ ತಾಲೂಕಿನ ಪೆರ್ಡೂರಿನಲ್ಲಿ ಇಂದು ಉದ್ಘಾಟನೆಗೊಂಡಿತು.

ನೂತನ ಶಾಖೆಯನ್ನು ಇಂಧನ ಸಚಿವ ವಿ ಸುನಿಲ್ ಕುಮಾರ್‌ ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಮಾತನಾಡಿ, ಜನಸ್ನೇಹಿ ಸೇವೆ ನೀಡಲು‌ನಾವು ಬದ್ದರಾಗಿದ್ದೇವೆ ಎಂದರು‌.

ಈ ಸಂದರ್ಭದಲ್ಲಿ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಅಭಿನಂದಿಸಲಾಯಿತು.

ಪೆರ್ಡೂರು ಗ್ರಾಪಂ ಅಧ್ಯಕ್ಷ ದೇವು ಪೂಜಾರಿ ಹೊಸಂಗಡಿ ಸೊಸೈಟಿಯ ಭದ್ರತಾ ವ್ಯವಸ್ಥೆಯನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀನಾರಾಯಣ ಜಿ. ಎನ್., ಪೆರ್ಡೂರು ಬಂಟರ ಸೌರ್ಹಾದ ಸಹಕಾರಿ ನಿಯಮಿತ ಅಧ್ಯಕ್ಷ ಕೆ. ಶಾಂತರಾಮ ಸೂಡ, ಪೆರ್ಡೂರು ಕುಂಬಾರರ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು ಮೊದಲಾದವರು ಉಪಸ್ಥಿತರಿದ್ದರು. ಶಾಖಾ ಸಲಹಾ ಸಮಿತಿ ಅಧ್ಯಕ್ಷ ನೀರೆ ರವೀಂದ್ರ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

See also  ಜಿಲಿಟಿನ್ ಪೌಡರ್ ಇದ್ದ ಗೂಡ್ಸ್ ಲಾರಿಗೆ ಬೆಂಕಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು