News Kannada
Friday, September 22 2023
ಉಡುಪಿ

ಕಾರ್ಕಳ: ಮನೆಕಳ್ಳತನ ಪ್ರಕರಣ, ಖತರ್ನಾಕ್ ಜೋಡಿ ಅಂದರ್, 9.75 ಲಕ್ಷ ರೂ. ಚಿನ್ನಾಭರಣ ವಶ

Karkala: House burglary case, Khatarnak jodi andar, rs 9.75 lakh seized Gold jewellery seized
Photo Credit : News Kannada

ಕಾರ್ಕಳ: ಕಲ್ಯಾ ಗ್ರಾಮದ ಉಷಾ ಜಗದೀಶ್‌ ಅಂಚನ್ ಎಂಬವರ ಮನೆಯ ಬಾಗಿಲು ಮುರಿದು ಗೋದ್ರೇಜ್‌ನಲ್ಲಿದ್ದ 9.75 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಇಂದು ಬಂಧಿಸಿದ್ದಾರೆ.

ಬಂಟ್ವಾಳದ ಕಾಂತರಬೆಟ್ಟು‌ ನಿವಾಸಿ 34ವರ್ಷದ ಪ್ರಸಾದ್ ಯಾನೆ ಪಚ್ಚು ಹಾಗೂ ಕಾರ್ಕಳ ಕಲ್ಯಾ ಗ್ರಾಮದ ನಿವಾಸಿ 39ವರ್ಷದ ಶಿಬಾ ಬಂಧಿತ ಆರೋಪಿಗಳು. ಆರೋಪಿ ಪ್ರಸಾದ್ ಎಂಬಾತನು ಎರಡನೇ ಆರೋಪಿ ಶಿಬಾ ಎಂಬಾಕೆ ನೀಡಿದ ಮಾಹಿತಿಯಂತೆ ಡಿ.3ರಂದು‌ ರಾತ್ರಿ ಕಲ್ಯಾ ಗ್ರಾಮದ ಉಷಾ ಜಗದೀಶ್‌ ಅಂಚನ್ ಎಂಬವರ ಮನೆಯ ಬಾಗಿಲು ಮುರಿದು ಒಳನುಗ್ಗಿ, ಗೋದ್ರೇಜ್‌ನಲ್ಲಿದ್ದ 9.75 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದನು.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು ಇಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 9.75 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

See also  ಬಂಟ್ವಾಳ: ಸೇತುವೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಜೆ.ಸಿ.ಮಾಧುಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು