News Kannada
Wednesday, October 04 2023
ಉಡುಪಿ

ಉಡುಪಿ: ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ- ಎಸ್ಪಿ

udupi-sp-issues-guidelines-for-new-year-celebrations-strict-action-will-be-taken-against-violators
Photo Credit : News Kannada

ಉಡುಪಿ: ಹೊಸ ವರ್ಷಾಚರಣೆಯ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಹೆಚ್ಚುವರಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನೇಮಿಸಿ, ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.

ಡಿ.31ರ ಮಧ್ಯರಾತ್ರಿ 1 ಗಂಟೆಯೊಳಗೆ ಎಲ್ಲಾ ರೀತಿಯ ಹೊಸ ವರ್ಷಾಚರಣೆಯ ಕಾರ್ಯಕ್ರಮ ಮುಕ್ತಾಯವಾಗಬೇಕು. ಪಬ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮುಂತಾದ ಕಡೆಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಇರದಂತೆ ನೋಡಿಕೊಳ್ಳಬೇಕು. ಹೋಟೆಲ್ /ಪಬ್/ರೆಸ್ಟೊರೆಂಟ್, ಹೋಮ್‌ಸ್ಟೇ/ಪಿಜಿಗಳಲ್ಲಿ ಸಾರ್ವಜನಿರಿಗೆ ಈವೆಂಟ್ಸ್ ಗಳನ್ನು ಆಯೋಜಿಸುವಾಗ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಬಸ್ ಸ್ಟಾಂಡ್, ಸಮುದ್ರ ತೀರ, ರಸ್ತೆ, ಫುಟ್ ಪಾತ್, ಗಾರ್ಡನ್ ಮತ್ತು ಇತರೇ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಯ ಯಾವುದೇ ಕಾರ್ಯಕ್ರಮಗಳನ್ನು ನಡೆಸಬಾರದು.

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥವಾ ಮದ್ಯದ ನಶೆಯಲ್ಲಿ ಆಚರಣೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರಗಿಸಲಾಗುವುದು. ಅಲ್ಲದೆ, ರಾತ್ರಿ ಹೊತ್ತು ಕುಡಿದು ವಾಹನ ಚಾಲನೆ ಮತ್ತು ಅತೀವೇಗ/ನಿರ್ಲಕ್ಷ್ಯತನದ ವಾಹನ ಚಾಲನೆ ನಡೆಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಎಸ್ಪಿ ಅಕ್ಷಯ್ ಮಚ್ಚೀಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.

See also  ಗೋಕರ್ಣ: ಧರ್ಮ ಸಮರದಲ್ಲಿ ರಾಮಭಟರಾಗಿ ಹೋರಾಡಿ- ರಾಘವೇಶ್ವರ ಶ್ರೀ ಕರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು