News Kannada
Friday, September 29 2023
ಉಡುಪಿ

ಉಡುಪಿ: ಪ್ರಮೋದ್ ಮಧ್ವರಾಜ್ ಎಲ್ಲೇ ಚುನಾವಣೆಗೆ ನಿಂತ್ರೂ ಸೋಲಿಸಿ- ಡಿ.ಕೆ. ಶಿವಕುಮಾರ್ 

Pramod Madhwaraj will be defeated wherever he contests elections. Shivakumar 
Photo Credit : News Kannada

ಉಡುಪಿ: ಮೊದಲ ಬಾರಿಗೆ ಶಾಸಕರಾದ ಪ್ರಮೋದ್ ಮಧ್ವರಾಜ್ ಅವರಿಗೆ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡಲಾಗಿತ್ತು. ಆದರೂ ಅವರು ಪಕ್ಷಕ್ಕೆ ದ್ರೋಹ ಮಾಡಿ ಬಿಜೆಪಿಗೆ ಹೋಗಿದ್ದಾರೆ. ಆದರೆ ಅವರ ಜತೆ ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕರ್ತರು ಹೋಗಿಲ್ಲ. ಹೀಗಾಗಿ ಜಿಲ್ಲೆಯ ಎಲ್ಲ ಕಾರ್ಯಕರ್ತರಿಗೆ, ನಾಯಕರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಉಡುಪಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಂದೆಗೆ ಶಾಸಕರಾಗಲು ಅವಕಾಶ, ತಾಯಿ ಹಾಗೂ ಮಗನಿಗೆ ಕಾಂಗ್ರೆಸ್ ಸಚಿವ ಸ್ಥಾನ ನೀಡಿತ್ತು. ಇದಕ್ಕಿಂತ ಹೆಚ್ಚಿನದನ್ನು ಕಾಂಗ್ರೆಸ್ ಏನು ನೀಡಲು ಸಾಧ್ಯ? 2023ರ ಚುನಾವಣೆಯಲ್ಲಿ ಪ್ರಮೋದ್, ಯಾವುದೇ ಪಕ್ಷದಿಂದ ನಿಂತರೂ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಿ, ಆತನನ್ನು ಸೋಲಿಸುವ ಕೆಲಸ ಮಾಡಬೇಕು. ನಮ್ಮ ಪಕ್ಷದಲ್ಲಿದ್ದಾಗ ವೇದಿಕೆ ಮೇಲೆ ಕೂರುತ್ತಿದ್ದರು. ಈಗ ಬಿಜೆಪಿಗೆ ಹೋಗಿ ಕೆಳಗೆ ಕೂರುವ ಸ್ಥಿತಿ ಬಂದಿದೆ ಎಂದು‌ ವ್ಯಂಗ್ಯವಾಡಿದರು.

See also  ಉಡುಪಿ: ನಗರದಲ್ಲಿ ಅಂತಾರಾಜ್ಯ ಕಳ್ಳನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು