News Kannada
Friday, June 09 2023
ಉಡುಪಿ

ಕಾರ್ಕಳ: ಉತ್ಪನ್ನಗಳ ಪ್ರದರ್ಶನ ಮಾರಾಟದಿಂದ ಸಬಲೀಕರಣದ ಸಫಲತೆಯ ಫಲ ಕಂಡು ಬರುತ್ತಿದೆ

Karkala: The success of empowerment is being reflected in the display and sale of products.
Photo Credit : News Kannada

ಕಾರ್ಕಳ: ಆಚಾರ-ವಿಚಾರ ಪದ್ಧತಿಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಒಂದು ವೇದಿಕೆಯಡಿ ಅವೆಲ್ಲ ಪ್ರದೇಶಗಳ ವಸ್ತು, ಉತ್ಪನ್ನಗಳನ್ನು ನೋಡುವ ಅವಕಾಶ ದೊರಕಿದೆ. ವಿವಿಧ ಜಲ್ಲೆಗಳ ಉತ್ಪನ್ನಗಳ ಪ್ರದರ್ಶನ ಮಾರಾಟದಿಂದ ಸಬಲೀಕರಣದ ಸಫಲತೆ ಫಲ ಕಂಡು ಬರುತ್ತಿದೆ ಎಂದು ಒಂದು ರೀತಿಯಲ್ಲಿ ಭಾರತ ದರ್ಶನ ಇಲ್ಲಿ ಆಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಭಾರತ ಸರಕಾರ-ಗಾಂಧೀ ಶಿಲ್ಕ್ ಬಜಾರ್, ಕನರ್ಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಬೆಂಗಳೂರು ಕನರ್ಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ರಾಷ್ಟ್ರಮಟ್ಟದ ಕರಕುಶಲ ವಸ್ತುಪ್ರದರ್ಶನ ಮತ್ತು ರಾಜ್ಯದ ಮಟ್ಟದ ಸಂಜೀವಿನಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೀನುಗಾರಿಕೆ ಮತ್ತು ಒಳನಾಡು ಸಆರಿಗೆ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ವಸ್ತುಪ್ರದರ್ಶನ ಉದ್ಘಾಟಿಸಿ ಶುಭಹಾರೈಸಿದರು.

ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ರೂಪಾ ಡಿ. ಮದ್ಗಿಲ್ ಅವರು ರಾಷ್ಟ್ರ ಮಟ್ಟದ ಕರಕುಶಲ ಮೇಳ ಇಲ್ಲಿ ನಡೆಯುತ್ತಿರುವುದು ಸಂತಸದ ಸಂಗತಿ. ಸರಕಾರ ಮತ್ತು ಸಚಿವರಿಂದ ನೆರವಿನಿಂದ ಈ ಕಾರ್ಯಕ್ರಮ ಸಾಧ್ಯವಾಗಿದೆ ಎಂದರು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೀ ಅಕ್ಷಯ್ ಮಚ್ಚೀಂದ್ರ, ಐಎಎಸ್ ಅಧಿಕಾರಿ ಯತೀಶ್, ಕುಂದಾಪುರ ಉಪವಿಭಗದ ಸಹಾಯಕ ಆಯುಕ್ತ ವಿ. ರಾಜು, ಹಿರಿಯ ನ್ಯಾಯವಾಧಿ ಎಂ.ಕೆ ವಿಜಯಕುಮಾರ್, ಕರಕುಶಲ ಹ್ಯಾಂಡಿಕ್ರಾಪ್ಟ್ ಅಸಿಸ್ಟೆಂಟ್ ಡೈರೆಕ್ಟರ್ ಮೈಕಲ್, ಸಂಜೀವಿನಿ ಒಕ್ಕೂಟದ ತಾಲೂಕು ಅಧ್ಯಕ್ಷೆ, ರೇವತಿ, ಜಿ.ಪಂ ಸಿಇಒ ಪ್ರಸನ್ನ ಪ್ರಸ್ತಾವನೆಗೈದರು. ಪ್ರಮೀಳಾ ನಾಗೇಶ್ ಸ್ವಾಗತಿಸಿ, ಅಂಕಿತಾ ವಂದಿಸಿ, ಗಣೇಶ್ ಜಾಲ್ಸೂರು ನಿರೂಪಿಸಿದರು. ಕಾರ್ಕಳ ಪ್ರವಾಸೋದ್ಯಮ ಕುರಿತ ಕಿರು ಹೊತ್ತಿಗೆ ಬಿಡುಗಡೆಗೊಂಡಿತು.

See also  ಭೋಪಾಲ್: ನಾಲ್ವರು ಡ್ರಗ್ ಪೆಡ್ಲರ್ ಗಳ ಬಂಧನ, 206 ಕೆಜಿ ಗಾಂಜಾ ವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು