News Kannada
Saturday, March 25 2023

ಉಡುಪಿ

ಉಡುಪಿ: ಜ.29ರಂದು “ಪುನೀತ್ ಪರ್ವ-2023” ಕಾರ್ಯಕ್ರಮ

Udupi: "Puneet Parva-2023" to be held on January 29
Photo Credit : News Kannada

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನ ಸಹಯೋಗದಲ್ಲಿ ಜಿಲ್ಲಾ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ಇದೇ ಜ‌.29ರಂದು ಸಂಜೆ 5 ಗಂಟೆಗೆ ನಗರದ ಮಿಷನ್ ಕಂಪೌಂಡ್ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ “ಪುನೀತ್ ಪರ್ವ-2023” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ನಟರಾಜ್ ಎಂಟರ್ ಟೇನರ್ಸ್ ತಂಡದಿಂದ ಅಂತರಾಷ್ಟ್ರೀಯ ಕಲಾವಿದರನ್ನು ಒಳಗೊಂಡ ಸಂಗೀತ ಸಂಜೆ ನಡೆಯಲಿದ್ದು, ಖ್ಯಾತ ಗಾಯಕ ರಾಜೇಶ್ ಕೃಷ್ಣನ್, ಜೀ ಕನ್ನಡ ಸರಿಗಮಪ ಖ್ಯಾತಿಯ ಸುಹಾನ ಸೈಯದ್‌, ಖ್ಯಾತ ಗಾಯಕಿ ಪುಷ್ಪ ಆರಾಧ್ಯ, ಕನ್ನಡ ಕೋಗಿಲೆ ಖ್ಯಾತಿಯ ಪುರುಷೋತ್ತಮ್, ಪ್ರಮುಖ ಕಲಾವಿದರಾದ ನಟರಾಜ್, ಹುಲಿ ಕಾರ್ತಿಕ್ , ಜಗ್ಗಪ್ಪ, ರಾಘವೇಂದ್ರ ಭಾಗವಹಿಸಲಿದ್ದಾರೆ.
ಸಂಜೆ 5.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ‌ ಸಚಿವರಾದ ವಿನಯ ಕುಮಾರ್ ಸೊರಕೆ , ಯು. ಟಿ.‌ಖಾದರ್,‌ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ‌ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ದಿನಕರ ಹೇರೂರು, ಪ್ರಶಾಂತ್ ಜತ್ತನ್, ಚರಣ್ ದೊಡ್ಡಣಗುಡ್ಡೆ ಇದ್ದರು.

See also  ನವದೆಹಲಿ: ನೆಹರೂ ಜಯಂತಿ, ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು