News Kannada
Saturday, June 03 2023
ಉಡುಪಿ

ಕುಂದಾಪುರ: ದೇವಾಲಯಗಳು ನಮ್ಮ ಸಂಪ್ರದಾಯದ ಪ್ರತೀಕ- ಡಾ.ವೀರೇಂದ್ರ ಹೆಗ್ಡೆ

Kundapur: Temples are a symbol of our traditions: Dr Veerendra Hegde
Photo Credit : News Kannada

ಕುಂದಾಪುರ: ದೇವಾಲಯಗಳಿಗೆ ಹೋಗುವುದರಿಂದ ಮನಸ್ಸು ಶುದ್ಧಿ ಆಗುವುದಲ್ಲದೆ ಜ್ಞಾನದ ಸಂಪಾದನೆ ಆಗುತ್ತದೆ. ದೇವಾಲಯಗಳು ಯಾವುದೇ ಒಂದು ನಿರ್ದಿಷ್ಟವಾದ ಜಾತಿ ಸಮುದಾಯಕ್ಕೆ ಸೇರಿದ ಸ್ಥಳಗಳಲ್ಲ ಸರ್ವರಿಗೂ ಸೇರಿದ ಶ್ರದ್ಧಾ ಕೇಂದ್ರಗಳು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಬೈಂದೂರು ತಾಲೂಕಿನ ಹಳಗೇರಿ ತೆಂಕಬೆಟ್ಟು ಶ್ರೀ ಕಾಲಭೈರವ ದೇವಾಲಯದ ನವೀಕೃತ ಶಿಲಾ ದೇಗುಲ ಲೋಕಾರ್ಪಣೆ ಬ್ರಹ್ಮ ಕಲಶೋತ್ಸವ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಹಲವರಿ ಮಠದ ಶ್ರೀ ಜಗದೀಶಾನಂದನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

ಮಾಜಿ ಶಾಸಕ ಗೋಪಾಲ ಪೂಜಾರಿ,ಕೃಷ್ಣಮೂರ್ತಿ ಮಂಜರು,ಶ್ರೀನಿವಾಸ ಜೋಗಿ ಕೃಷ್ಣ ಪೂಜಾರಿ ಇನ್ನಿತರರು ಭಾಗವಹಿಸಿದ್ದರು. ಮಾಜಿ ಶಾಸಕರಾದ ಬಿ ಅಪ್ಪಣ್ಣ ಹೆಗಡೆ ಅವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಲಭೈರವ ದೇವಾಲಯ ಜೀರ್ಣೋದ್ಧಾರ ಸಮಿತಿಯಿಂದ ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಲಾಯಿತು.

See also  ಗದಗ: ಅ.30ರಂದು ಅಖಿಲ ಭಾರತ ಗಜಲ್ ಸಾಹಿತ್ಯ ಸಮ್ಮೇಳನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು