News Kannada
Saturday, April 01 2023

ಉಡುಪಿ

ಉಡುಪಿ ಕ್ಷೇತ್ರದಿಂದ ನನಗೆ ಟಿಕೆಟ್ ಖಾತ್ರಿ: ಶಾಸಕ ರಘುಪತಿ ಭಟ್ ವಿಶ್ವಾಸ

I will get 100 per cent ticket from Udupi: Raghupathi Bhat
Photo Credit : News Kannada

ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ನೂರಕ್ಕೆ ನೂರು ನನಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡುತ್ತದೆ. ಬಿಜೆಪಿ ಟಿಕೆಟ್ ಪಡೆಯಲು ನನಗೆ ಕಷ್ಟ ಇಲ್ಲ ಎಂದು ಶಾಸಕ ರಘುಪತಿ‌ ಭಟ್ ವಿಶ್ವಾಸ ವ್ಯಕ್ತಪಡಿಸಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕತ್ವದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ‌. ನಾನು ತಳಮಟ್ಟದಿಂದ ಬಂದವನು. ಬಿಜೆಪಿಯ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದವನು. ಹಾಗಾಗಿ ಬಿಜೆಪಿ ಸಿಸ್ಟಮ್ ಹೇಗಿದೆಂಬುವುದು ನನಗೆ ಚೆನ್ನಾಗಿ ಗೊತ್ತಿದೆ ಎಂದರು.

ಬದಲಾವಣೆ ಯಾರನ್ನು ಮಾಡಬಹುದು ಅಂದ್ರೆ, ಕೆಲಸ ಮಾಡದ ಶಾಸಕನನ್ನು ಬದಲಾವಣೆ ಮಾಡಬಹುದು. ನಾನು ನಿರಂತರವಾಗಿ ಜನರ ಜೊತೆ ಸಂಪರ್ಕ ಇಟ್ಟುಕೊಂಡು, 224 ಕ್ಷೇತ್ರಗಳಲ್ಲಿ ಮಾಡದಿದ್ದಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಉಡುಪಿ ಕ್ಷೇತ್ರದಲ್ಲಿ ಮಾಡಿದ ಶಾಸಕ. ಆದ್ದರಿಂದ ಚುನಾವಣೆಯಲ್ಲಿ ನೂರಕ್ಕೆ ನೂರು ಟಿಕೆಟ್ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಅಭ್ಯರ್ಥಿಯೇ ಇಲ್ಲ ಎನ್ನುವಂತಹ ರೀತಿಯಲ್ಲಿ ಬಿಜೆಪಿ ಬೆಳೆದಿದೆ. ಅದಕ್ಕೆ ಕಾರಣ ನಾನು ಮೂರು ಬಾರಿ ಶಾಸಕನಾಗಿ ತಳಮಟ್ಟದ ಕಾರ್ಯಕರ್ತರನ್ನು ಬೆಳೆಸಿದ್ದೇನೆ. ಜನರ ವಿಶ್ವಾಸವನ್ನು ಗಳಿಸಿದ್ದೇನೆ. ಪಕ್ಷ ಯಾವ ನಿರ್ಧಾರ ಕೈಗೊಂಡರೂ ಅದಕ್ಕೆ ನಾನು ಸಿದ್ದವಾಗಿದ್ದೇನೆ. ಹಾಗಿದ್ದರೂ ಪಕ್ಷ ನನಗೆ ಟಿಕೆಟ್ ನೀಡುತ್ತೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದರು.

See also  ಉಡುಪಿಯ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ಲೋಕಾರ್ಪಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು