News Kannada
Thursday, March 23 2023

ಉಡುಪಿ

ಉಡುಪಿ : ಜಿಲ್ಲೆಯ ಎಲ್ಲಾ ದಿವ್ಯಾಂಗರಿಗೆ ಸಾಧನ ಸಲಕರಣೆ ವಿತರಣೆಗೆ ಬದ್ಧ – ಶೋಭಾ ಕರಂದ್ಲಾಜೆ

Committed to distributing aids and appliances to all divyangs in Udupi district: Shobha Karandlaje
Photo Credit : News Kannada

ಉಡುಪಿ: ಜಿಲ್ಲೆಯಲ್ಲಿನ ಎಲ್ಲಾ ದಿವ್ಯಾಂಗರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ಕೇಂದ್ರ ಸರ್ಕಾರದ ನೆರವಿನಿಂದ ನೀಡಲು ಬದ್ಧವಾಗಿದ್ದು, ದಿವ್ಯಾಂಗರಿಗೆ ಅಗತ್ಯವಿರುವ ಸಾಧನ ಸಲಕರಣೆಗಳ ಬಗ್ಗೆ ಸಮಗ್ರ ಸರ್ವೆ ನಡೆಸಿ , ಅರ್ಹರ ಪಟ್ಟಿಯನ್ನು ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಇಂದು ನಗರದ ಮಿಷನ್ ಕಾಂಪೌ0ಡ್ ನ ಬೆಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಮ್ ನಲ್ಲಿ ನಡೆದ , ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ ಹಾಗೂ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಮ್ಕೋ) ಇವರ ಸಹಯೋಗದಲ್ಲಿ ಸಾಮಾಜಿಕ ಅಧಿಕಾರಿತಾ ಶಿಬಿರ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಲಿಂಕೋ ವತಿಯಿಂದ ದೇಶದಾದ್ಯಂತ ವಿಕಲಚೇತನರಿಗೆ ಉಚಿತ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು , ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ದಿವ್ಯಾಂಗ ರಿಗೆ ದೈನಂದಿನ ಕೆಲಸ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲು ಸೂಕ್ತ ಪರಿಕರಗಳನ್ನು ವಿತರಿಸಲಾಗಿದ್ದು , ಪ್ರಸ್ತುತ 1,390 ದಿವ್ಯಂಗರಿಗೆ 2144 ಸಾಧನಾ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಇನ್ನೂ ಎಷ್ಟೇ ಮಂದಿ ಅರ್ಹರಿದ್ದರು ಅವರೆಲ್ಲರಿಗೂ ಸಾಧನ ಸಲಕರಣೆಗಳನ್ನು ವಿತರಿಸಲು ಅಗತ್ಯವಿರುವ ವಿತರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ , ನಗರಸಭೆ ಅಧ್ಯಕ್ಷ ಸುಮಿತ್ರಾ ನಾಯಕ್ , ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಪ್ರಸನ್ನ , ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕ ಶಿವಕುಮಾರಯ್ಯ ,
ಜಿಲ್ಲಾ ವಿಕಲಚೇತನ ಅಧಿಕಾರಿ ರತ್ನ, ಉಡುಪಿ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರುರು ರಾಜೀವ ಶೆಟ್ಟಿ ಮತ್ತಿತರರು ಉಪಸಿತರಿದ್ದರು.

ಅಲಿಂಕೋ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಅಶೋಕ್ ಕುಮಾರ್ ಸ್ವಾಗತಿಸಿದರು ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ವೀಣಾ ವಿವೇಕಾನಂದ ವಂದಿಸಿದರು

See also  ಕುಕ್ಕುಂದೂರು: ಬಾವಿಗೆ ಬಿದ್ದು ವೃದ್ಧ ಮೃತ್ಯು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು