News Kannada
Friday, March 31 2023

ಉಡುಪಿ

ಕುಂದಾಪುರ: ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಮತ್ತೆ ಟಿಕೆಟ್ ಸಿಗುವ ಸಾಧ್ಯತೆ

Sitting MLA Haladi Srinivas Shetty is likely to get a ticket again.
Photo Credit : News Kannada

ಕುಂದಾಪುರ: ರಾಜ್ಯದಲ್ಲಿ ವಿಧಾನಸಭೆ ಸಭೆ ಚುನಾವಣೆ ಖದರ್ ಕಳೆ ಕಟ್ಟಿದೆ ಆಡಳಿತ ರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಚುನಾವಣೆ ಸಮರ ನಡೆಯುತ್ತಿದೆ‌.

ಬಿಜೆಪಿ ಪಕ್ಷ ಅಧಿಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನವನ್ನು ಮಾಡುತ್ತಿದ್ದರೆ ಕಾಂಗ್ರೆಸ್ ಪಕ್ಷ ಆಡಳಿತದ ಚುಕ್ಕಾಣಿ ಹಿಡಿಯಲು ತುದಿಗಾಲಲ್ಲಿ ನಿಂತಿದೆ ಜೆಡಿಎಸ್ ಪಕ್ಷದ ನಾಯಕರು ಈ ಸಲ ನಾವೇ ನಿರ್ಣಾಯಕ ಎನ್ನುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಪ್ರಚಾರದ ಕೆಲಸವನ್ನು ಕೈಗೊಂಡಿದ್ದಾರೆ.

ಉಡುಪಿ ಜಿಲ್ಲೆಯ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗುತ್ತದೆ ಎನ್ನುವ ಗಾಳಿ ಸುದ್ದಿಗಳು ತೇಲಾಡುತ್ತಿದೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ ವಿಚಾರಕ್ಕೆ ಬಂದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಟಿಕೆಟ್ ಖಚಿತ ಎನ್ನಲಾಗುತ್ತಿದೆ.

ಸೋಲಿಲ್ಲದ ಸರದಾರನಾಗಿ ಸತತ ನಾಲ್ಕು ಬಾರಿ ಗೆಲುವುವನ್ನು ಕಂಡಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಬೇರೆ ಯಾವ ಪಕ್ಷದಿಂದಲೂ ಸಮರ್ಥವಾದ ಎದುರಾಳಿಗಳೇ ಇಲ್ಲಾ ಎನ್ನುವಂತ ವಾತಾವರಣ ನಿರ್ಮಾಣವಾಗಿದ್ದು ಬಿಜೆಪಿ ಭದ್ರಕೋಟೆಯಾದ ಕುಂದಾಪುರ ವಿಧಾನಸಭಾ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳುವುದು ಕಾಂಗ್ರೆಸ್ ಪಕ್ಷಕ್ಕೆ ಸುಲಭದ ಮಾತಲ್ಲ.

ಚುನಾವಣೆಯಲ್ಲಿ ಮತದಾರರ ಪಾತ್ರವೇ ಬಹು ಮುಖ್ಯ ವಾಗಿರುವುದರಿಂದ ಮ್ಯಾಜಿಕ್ ನಡೆದರೂ ಅಚ್ಚರಿ ಇಲ್ಲ.

See also  ಪೋಕ್ಸೊ ಪ್ರಕರಣ ರದ್ದು, ಆರೋಪಿ ಮತ್ತು ಸಂತ್ರಸ್ತೆಯ ವಿವಾಹವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು