News Kannada
Friday, September 29 2023
ಉಡುಪಿ

ಕುಂದಾಪುರ:ಬೈಂದೂರು ಕ್ಷೇತ್ರಕ್ಕೆ ಜೆ.ಪಿ ನಡ್ಡಾ ಭೇಟಿ, ಮುಳ್ಳಿಕಟ್ಟೆಯಲ್ಲಿ ಸಿದ್ದತೆ

j p nadda
Photo Credit : News Kannada

ಕುಂದಾಪುರ: ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಫೆ.20 ಸೋಮವಾರ ದಂದು ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭೆ ಕ್ಷೇತ್ರದ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಗುಸಿಟಿ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪಕ್ಷದ ಸಮಾವೇಶದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಪೆಂಡಾಲ್‍ನ್ನು ಹಾಕಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ವಾಗುತ್ತಿರುವ ಹೊತ್ತಿನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೆ ಕ್ಷೇತ್ರಕ್ಕೆ ಆಗಮಿಸುತ್ತಿರುವುದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಗರಿಗೆದರಿದೆ.ಸಮಾವೇಶದಲ್ಲಿ 20,000 ಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದ್ದು ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಹೇಲಿಪ್ಯಾಡ್ ನಿರ್ಮಾಣ: ಹೊಸಾಡು ಮುಳ್ಳಿಕಟ್ಟೆ ನಗುಸಿಟಿ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪಕ್ಷದ ಸಮಾವೇಶದಲ್ಲಿ ಜೆ.ಪಿ ನಡ್ಡಾ ಅವರು ಭಾಗವಹಿಸುತ್ತಿರುವುದರಿಂದ ಗುಜ್ಜಾಡಿ ಗ್ರಾಮದ ಕೊಡಪಾಡಿಯಲ್ಲಿ ಹೇಲಿಪ್ಯಾಡ್ ನಿರ್ಮಾಣದ ಕಾರ್ಯ ನಡೆಯುತ್ತಿದೆ.ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ನಾಯಕರುಗಳು ಭಾಗವಹಿಸುತ್ತಿರುವುದರಿಂದ ಬೈಂದೂರು ಬಿಜೆಪಿ ಮಂಡಲ ಭರ್ಜರಿ ತಯಾರಿಯನ್ನು ಮಾಡಿಕೊಂಡಿದ್ದೆ.

See also  ಮಂಗಳೂರು: ಮಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು