News Kannada
Friday, March 24 2023

ಉಡುಪಿ

ಉಡುಪಿ: ಕಸದ ರಾಶಿಗೆ ವ್ಯಕ್ತಿ ಎಸೆದ ಪ್ರಕರಣಕ್ಕೆ ಟ್ವಿಸ್ಟ್, ಇಬ್ಬರು ವಶಕ್ಕೆ

8 youths arrested in connection with clash at Harobenavalli
Photo Credit : News Kannada

ಉಡುಪಿ:  ಟೆಂಪೋ ರಿಕ್ಷಾದಲ್ಲಿ ಮೃತದೇಹ ತಂದು ಕಸದರಾಶಿಯಲ್ಲಿ ಎಸೆದುಹೋದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಕೂಲಿ ಕಾರ್ಮಿಕನ ಪತ್ನಿ ತನ್ನ ಪತಿಯ ಸಾವಿನಲ್ಲಿ ಸಂಶಯವಿದೆ ಎಂದು ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಏನಿದು ಪ್ರಕರಣ.?: ಫೆ.16ರಂದು ಮಧ್ಯಾಹ್ನ ಟೆಂಪೋ ರಕ್ಷಾದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕೆಮ್ಮಣ್ಣು  ಸಂತೆ ಮಾರ್ಕೆಟ್ ಬಳಿ ಕಸದ ರಾಶಿಗೆ ವ್ಯಕ್ತಿಯೊಬ್ಬರನ್ನು ಎಸೆದು ಹೋಗಿದ್ದರು. ಆದರೆ ಆ ವ್ಯಕ್ತಿ ಬಳಿಕ ಮೃತಪಟ್ಟಿದ್ದನು.‌ ವ್ಯಕ್ತಿಯನ್ನು ಎಸೆದು ಹೋಗುವ ದೃಶ್ಯ ಅಲ್ಲೆ ಎದುರಿನ  ಮಳಿಗೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿಯ‌ ದೃಶ್ಯ ವೈರಲ್ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿತ್ತು.
ಬಳಿಕ ಪೊಲೀಸರು ವ್ಯಕ್ತಿಯನ್ನು ಎಸೆದುಹೋದ ಬಸವರಾಜ್ ನಾಗಪ್ಪ ಹಳೆಮನೆ ಹಾಗೂ ಇನ್ನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಮೃತ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿ ಹನುಮಂತಪ್ಪ (39) ಎಂದು ತಿಳಿದುಬಂದಿತ್ತು. ಈತ ಸಂತೆ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ಕೆಮ್ಮಣ್ಣು ಸಂತೆಗೆ ಪರಿಚಯದ ಬಸವರಾಜ್ ನಾಗಪ್ಪ ಹಳೆಮನೆ ಎಂಬಾತನೊಂದಿಗೆ ಬಂದಿದ್ದನು. ಆದರೆ, ಹನುಮಂತಪ್ಪನು ಎದೆನೋವು ಜ್ವರ ತಲೆನೋವು ಎಂದು ಹೇಳಿದ್ದು, ಆಗ ಬಸವರಾಜ್ ಜ್ವರದ ಮಾತ್ರೆ ಹಾಗೂ ಜಂಡು ಬಾಂಬ್ ತಂದು ಕೊಟ್ಟಿದ್ದನು.‌ ನಂತರ ಮಧ್ಯಾಹ್ನ ಸುಮಾರು 1.30 ಕ್ಕೆ ಬಸವರಾಜ್ ರಿಕ್ಷಾದ ಬಳಿ ಬಂದಾಗ ನೋಡಿದಾಗ ಹನುಮಂತಪ್ಪ ಮಲಗಿದ್ದು, ಎಷ್ಟೇ ಕರೆದು ಎಬ್ಬಿಸಿದರೂ ಏಳದೆ ಇದ್ದಾಗ ಮದ್ಯಪಾನ ಮಾಡಿ ಮಲಗಿರಬಹುದು ಎಂದು ಊಹಿಸಿ ಆತನನ್ನು ರಿಕ್ಷಾದಿಂದ ಕೆಳಗೆ ಇಳಿಸಿ ರಸ್ತೆಯ ಬದಿ ಮರದ ನೆರಳಿನಲ್ಲಿ ಮಲಗಿಸಿ ಹೋಗಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಬಸವರಾಜ್  ತಿಳಿಸಿದ್ದನು.

ಮೇಲ್ನೋಟಕ್ಕೆ ಪರಿಶೀಲನೆ ನಡೆಸಿದಾಗ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿರಲಿಲ್ಲ. ಕೊಲೆ ಎಂಬುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಎಸ್ಪಿ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದರು.

ಪತಿಯ ಸಾವಿನಲ್ಲಿ ಸಂಶಯವಿದೆ: ಪತ್ನಿ ಮಂಜುಳಾ: ಉಡುಪಿಗೆ ಆಗಮಿಸಿರುವ ಮೃತ ಹನುಮಂತಪ್ಪನ ಪತ್ನಿ ಮಂಜುಳಾ ಅವರು ನನ್ನ ಪತಿಯ ಸಾವಿನಲ್ಲಿ ಸಂಶಯವಿದೆ. ಹಾಗಾಗಿ ಸೂಕ್ತ ತನಿಖೆ‌ ನಡೆಸುವಂತೆ ಆಗ್ರಹಿಸಿ ದೂರು ನೀಡಿದ್ಧಾರೆ. ಅದರ ಆಧಾರದಲ್ಲಿ ತನಿಖೆ ಮುಂದುವರಿದಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

See also  ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು