News Kannada
Friday, March 24 2023

ಉಡುಪಿ

ಉಡುಪಿ: 3 ವರ್ಷ ಬಳಿಕ ಮರಳಿ ಕುಟುಂಬ ಸೇರಿದ ಬಿಹಾರದ ಮಹಿಳೆ

Bihar woman rejoined family after 3 years
Photo Credit : News Kannada

ಉಡುಪಿ: ಮಾನಸಿಕ ಅಸ್ವಸ್ಥತೆಯಿಂದಾಗಿ ತನ್ನ ಕುಟುಂಬವನ್ನು ತೊರೆದು ಬೀದಿ ಪಾಲಾಗಿದ್ದ ಬಿಹಾರ ಮೂಲದ ಮಹಿಳೆಯೊಬ್ಬರು ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಹಾಗೂ ಮಂಜೇಶ್ವರದ ದೈಗೋಳಿ ಶ್ರೀಸಾಯಿ ಸೇವಾಶ್ರಮದ ಡಾ. ಉದಯ ಕುಮಾರ್ ದಂಪತಿಯ ನೆರವಿನಿಂದ ಗುಣಮುಖರಾಗಿ 3 ವರ್ಷದ ಬಳಿಕ ತನ್ನ ಕುಟುಂಬವನ್ನು ಮರಳಿ ಸೇರಿದ ಅಪರೂಪದ ಘಟನೆ ನಡೆದಿದೆ.

ಬಿಹಾರದ 33ವರ್ಷದ ಸಪ್ನಾ ಮನೆ ಸೇರಿದ ಮಹಿಳೆ. ವರ್ಷದ ಹಿಂದೆ ನಗರದ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ನಲ್ಲಿ ಗೋಣಿ ಚೀಲಗಳಲ್ಲಿ ನಿರುಪಯುಕ್ತ ವಸ್ತು ಆಯ್ದು, ಹಸಿ ಮೀನು ತಿನ್ನುತ್ತಾ, ದುರಂತ ಬದುಕು ಸಾಗಿಸುತ್ತಿದ್ದು, ಮಾಹಿತಿ ಪಡೆದ ವಿಶು ಶೆಟ್ಟಿ ಅವರು ಕಾರ್ಯಾಚರಣೆ ನಡೆಸಿ ಸಾರ್ವಜನಿಕರ ಸಹಕಾರದಿಂದ ಮಹಿಳೆಯನ್ನು ವಶಕ್ಕೆ ಪಡೆದು ಮಂಜೇಶ್ವರದ ಶ್ರೀಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದರು.

ಸೇವಾಶ್ರಮದ ಡಾ.ಉದಯ ಕುಮಾರ್ ದಂಪತಿಯ ವೈದ್ಯಕೀಯ ಚಿಕಿತ್ಸೆ ಹಾಗೂ ಆರೈಕೆಯಿಂದ ಚೇತರಿಸಿಕೊಂಡ ಸಪ್ನಾ ಬಿಹಾರದ ತನ್ನ ಕುಟುಂಬದ ವಿಳಾಸವನ್ನು ನೀಡಿದ್ದಾಳೆ. ಆದರೆ ಈಕೆ ನೀಡಿದ ವಿಳಾಸಕ್ಕೆ ಕರೆದೊಯ್ದು ಬಿಡುವುದು ಸವಾಲಿನ ಕೆಲಸವಾಗಿತ್ತು. ಹೀಗಾಗಿ ಮುಂಬೈ ಶ್ರದ್ಧಾ ಪುನರ್ವಸತಿ ಕೇಂದ್ರದ ನೆರವು ಪಡೆದು ಮಹಿಳೆಯನ್ನು ಆಕೆಯ ಕುಟುಂಬಕ್ಕೆ ಸೇರಿಸಲಾಯಿತು.

See also  ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾ ಫಲಿತಾಂಶ ಮತ್ತು ಅಂಕಪಟ್ಟಿ ವಿತರಣೆ ಕುರಿತು ಸ್ಪಷ್ಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು