News Kannada
Thursday, March 23 2023

ಉಡುಪಿ

ಉಡುಪಿ: ಆತ್ಮಹತ್ಯೆಗೈಯಲು‌ ಬಂದಿದ್ದ ಮಹಿಳೆಯ ರಕ್ಷಣೆ

Rescue of woman who had come to commit suicide
Photo Credit : News Kannada

ಉಡುಪಿ: ಆತ್ಮಹತ್ಯೆಗೈಯಲು ಬಂದಿದ್ದ ಮಹಿಳೆಯನ್ನು ಇಂದ್ರಾಳಿಯ ರೈಲುನಿಲ್ದಾಣದಲ್ಲಿ ರೈಲ್ವೆ ಪೋಲಿಸರು ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಅವರು ರಕ್ಷಣೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ಬಳಿಕ ಮಹಿಳೆಯನ್ನು ಬೈಲೂರಿನ ಹೊಸ ಬೆಳಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಲಾಗಿದೆ. ರಕ್ಷಿಸಲ್ಪಟ್ಟ ಮಹಿಳೆಯನ್ನು ಗೆದ್ಲಹಳ್ಳಿಯ ನಿವಾಸಿ 32ವರ್ಷದ ಸವಿತಾ ಎಂದು ಗುರುತಿಸಲಾಗಿದೆ.

ಸಂಬಂಧಿಕರು ಕಾರ್ಕಳ ಬೈಲೂರಿನ ಹೊಸಬೆಳಕು ಆಶ್ರಮವನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಕಾರ್ಯಾಚರಣೆಯಲ್ಲಿ ಇನ್ ಸ್ಪೆಕ್ಟರ್ ಪಿ.ವಿ ಮಧುಸೂದನ್, ಕಾನ್ಸ್ಟೇಬಲ್ ಜೀನಾ ಪಿಂಟೋ, ಆಶ್ರಮ ಸಂಚಾಲಕಿ ತನುಲಾ ತರುಣ್ ಭಾಗಿಯಾಗಿದ್ದರು.

ರಕ್ಷಿಸಲ್ಪಟ್ಟ ಮಹಿಳೆಯು ಮಾನಸಿಕವಾಗಿ ನೊಂದಿದ್ದು, ಜೀವನದಲ್ಲಿ ಎದುರಾದ ಕೌಟುಂಬಿಕ ಸಮಸ್ಯೆಗಳು ಎದುರಿಸಲಾಗಿದೆ ಆತ್ಮಹತ್ಯೆಗೈಯಲು ಬಂದಿರುವುದಾಗಿ ಹೇಳಿಕೊಂಡಿದ್ದಾಳೆ. ರೈಲು ನಿಲ್ದಾಣದಲ್ಲಿ ಮಹಿಳೆಯ ನಡವಳಿಕೆಯಲ್ಲಿ ಸಂಶಯ ಪಟ್ಟ ಕರ್ತವ್ಯನಿರತ ಪೋಲಿಸರು ವಿಚಾರಿಸಿದಾಗ ವಿಷಯ ತಿಳಿದುಬಂದಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

See also  ಮಣಿಪಾಲ್: ಡಿ.5ರಿಂದ 24ರ ವರೆಗೆ ಮಿದುಳು ಜ್ವರ ಲಸಿಕಾ ಅಭಿಯಾನ- ಡಿಸಿ ಕೂರ್ಮಾರಾವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು