News Kannada
Friday, March 31 2023

ಉಡುಪಿ

ಉಡುಪಿ: ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರಕಾರಿ ನೌಕರರ ಪ್ರತಿಭಟನೆ

Government employees stage protest demanding implementation of 7th Pay Commission
Photo Credit : News Kannada

ಉಡುಪಿ: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಮುಷ್ಕರ ನಡೆಸಿದರು.

ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು ನೇತೃತ್ವದಲ್ಲಿ ಪದಾಧಿಕಾರಿಗಳು ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಆಗಮಿಸುತ್ತಿದ್ದ ಸರಕಾರಿ ನೌಕರರ ಮನವೊಲಿಸಿ ವಾಪಾಸ್ಸು ಕಳುಹಿಸಿದರು. ಆದರೆ ಹೊರಗುತ್ತಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿರುವುದು ಕಂಡುಬಂತು. ಜಿಲ್ಲೆಯ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಸೇರಿದಂತೆ ಬಹುತೇಕ ಸರಕಾರಿ ಕಚೇರಿಗಳು ನೌಕರರ ಗೈರು ಹಾಜರಿಯಿಂದ ಖಾಲಿಖಾಲಿಯಾಗಿರುವುದು ಕಂಡುಬಂತು.

ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಕೂಡ ಮುಷ್ಕರದಲ್ಲಿ ಭಾಗಿಯಾಗಿರುವುದರಿಂದ ಕೆಲವು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

See also  ಕೊರಗರು ಎಲ್ಲ‌ ಸಮುದಾಯದವರೊಂದಿಗೆ ಬೆರೆಯುವ ವಾತಾವರಣ ಸೃಷ್ಟಿಯಾಗಬೇಕು: ಶಾಸಕ ರಘುಪತಿ‌ ಭಟ್ 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು