News Kannada
Thursday, March 23 2023

ಉಡುಪಿ

ಕುಂದಾಪುರದಲ್ಲಿ ನೇತ್ರಾವತಿ ಎಕ್ಸ‌ಪ್ರೆಸ್ ರೈಲು ನಿಲುಗಡೆ

The railways department of the central government has fulfilled the demands of the people of Udupi and Chikkamagaluru districts.
Photo Credit : News Kannada

ಕುಂದಾಪುರ: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗದ ಜನರ ಬೇಡಿಕೆಯನ್ನು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಈಡೇರಿಸಿದೆ.

ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ರೇಲ್ವೆ ಸಚಿವರಿಗೆ ಪತ್ರ ಬರೆದು, ಸಭೆ ನಡೆಸಿ ಮನವಿಯನ್ನು ಮಾಡಿದ್ದರು.

ಸಚಿವರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಆಯ್ದ ಸ್ಥಳಗಳಲ್ಲಿ ರೈಲು ನಿಲುಗಡೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ.

ಕುಂದಾಪುರ ತಾಲೂಕಿನ ಜನರ ಬಹುದಿನಗಳ ಕನಸನ್ನು ಈಡೇರಿಕೆಗೆ ಮಾಡಿದ ಕೇಂದ್ರ ರೈಲ್ವೆ ಸಚಿವರು ನೇತ್ರಾವತಿ ಎಕ್ಷಪ್ರೆಸ್‍ಗೆ ಕುಂದಾಪುರದಲ್ಲಿ ನಿಲುಗಡೆಗೆ ನೀಡಿಡಲು ಆದೇಶ ಹೊರಡಿಸಿದ್ದಾರೆ.ದೂರದ ಊರುಗಳಿಗೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ನಿಲುಗಡೆ ಆಗುವುದರಿಂದ ಬಹಳಷ್ಟು ಅನುಕೂಲವಾಗಲಿದೆ.

ಮಂಗಳೂರಿನಿಂದ ಮುಂಬೈ/ಮುಂಬೈನಿಂದ ಮಂಗಳೂರು ಮಾರ್ಗವಾಗಿ ಸಂಚರಿಸುವ – ಮಂಗಳೂರು ಮತ್ಯಗಂದ ಎಕ್ಸಪ್ರೆಸ್‍ಗೆ (12616/20) ಉಡುಪಿ ಜಿಲ್ಲೆಯ ಬಾರ್ಕೂರು ರೇಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡುವ ಬಗ್ಗೆಯೂ ಪ್ರಯಾಣಿಕರಿಂದ ಬೇಡಿಕೆಯಿತ್ತು.

ಕರಾವಳಿ ಭಾಗದ ಪ್ರಯಾಣಿಕರಿಗೆ ಮತ್ಸ್ಯಗಂದ ರೈಲು ಬಾರ್ಕೂರು ನಿಲುಗಡೆ ಗೊಳ್ಳವುದರಿಂದ ಹೆಚ್ಚಿನ ಅನುಕೂಲವಾಗಲಿದೆ. ವಿಶೇಷವಾಗಿ ಹೋಟೆಲ್ ಉದ್ಯಮ, ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಈ ನಿಲುಗಡೆ ಬಹಳ ಉಪಯುಕ್ತವಾಗಲಿದೆ.

See also  ಬಂಟ್ವಾಳ: ಮೆದುಳು ಜ್ವರ ಲಸಿಕಾ ಅಭಿಯಾನದ ಉದ್ಘಾಟನ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು