News Kannada
Friday, March 31 2023

ಉಡುಪಿ

ಬೀಡಿನ ಗುಡ್ಡೆ: ಜೆಸಿಬಿ ಮುಂದೆ ಕುಳಿತು‌ ಘರ್ಜಿಸಿದ ನಿತ್ಯಾನಂದ ಒಳಕಾಡು

Beedi's gudde: Nithyananda sits in front of JCB and roars
Photo Credit : News Kannada

ಬೀಡಿನ ಗುಡ್ಡೆ: ಶಾರದ ಮಂಟಪದಿಂದ ಬೀಡಿನ ಗುಡ್ಡೆ ರಸ್ತೆ ಸುಸ್ಥಿತಿಯಲ್ಲಿದ್ದರೂ ಅದನ್ನು ಅಗೆದು ಕಾಂಕ್ರೀಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭೆ ಸದಸ್ಯ ಗಿರೀಶ್ ಅಂಚನ್ ಹಾಗೂ ನಿತ್ಯಾನಂದ ವಳಕಾಡು ನಡುವೆ ಕೆಲಕಾಲ ವಾದ ಪ್ರತಿವಾದ ನಡೆಯಿತು.

ಐದು ದಿನಗಳಿಂದ ಕಾಂಕ್ರೀಟ್ ರಸ್ತೆಯನ್ನು ಅಗೆಯುತ್ತಿದ್ದು, ನಿತ್ಯಾನಂದ ಒಳಕಾಡು ಎರಡು ದಿನದ ಹಿಂದೆಯೇ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ನಗರ ಸಭೆಯ ಅಧಿಕಾರಿಗಳ ಗಮನವನ್ನು ಸೆಳೆದಿದ್ದರು. ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗುತ್ತಿದೆ. ಇದೊಂದು ದುಂದುವೆಚ್ಚದ ಕಾಮಗಾರಿ ಎಂಬುದು ನಿತ್ಯಾನಂದ ಒಳಕಾಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿಯಿಂದ ಶಾರದ ಮಂಟಪವರೆಗೆ ಈಗಾಗಲೇ ಹೊಸ ರಸ್ತೆ ನಿರ್ಮಾಣವಾಗಿದೆ. ಒಳಚರಂಡಿ ನಿರ್ಮಾಣ ಮಾಡುವ ಸಂದರ್ಭ ಅಲ್ಲಾಲ್ಲಿ ರಸ್ತೆ ಹಾಳಾಗಿದ್ದು, ಹೊಸ ರಸ್ತೆ ನಿರ್ಮಾಣ ಆಗಬೇಕಾಗಿದೆ ಎಂದು ನಗರಸಭಾ ಸದಸ್ಯ ಗಿರೀಶ್ ಅಂಚನ್ ಹೇಳಿದ್ರು. ಇಷ್ಟೋತ್ತಿಗೆ ಅಲ್ಲಿಗೆ ಬಂದ ಸ್ಥಳೀಯರು ಹೊಸ ರಸ್ತೆಯನ್ನು ನಮಗೆ ನಿರ್ಮಾಣ ಮಾಡಿಕೊಡಿ. ಹಳೆಯ ರಸ್ತೆ ಮತ್ತು ಹೊಸ ರಸ್ತೆ ಅಗಲ ಎತ್ತರ ವ್ಯತ್ಯಾಸ ಬರುತ್ತದೆ. ಮುಂದೆ ಮಳೆಗಾಲದಲ್ಲಿ ಹೊಂಡ ಬೀಳುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಈ ಬಗ್ಗೆ ನಿತ್ಯಾನಂದ ಒಳಕಾಡು ನಗರಸಭೆ ಕಮಿಷನರ್ ಗಮನ ಸೆಳೆದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ. ಸದ್ಯಕ್ಕೆ ಕಾಂಕ್ರೀಟ್ ರಸ್ತೆ ಅಗೆಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.

See also  ಕುಂದಾಪುರ: ಶ್ರೀಮಾರಿಕಾಂಬಾ ದೇವಿ ದೇವಸ್ಥಾನ ಕೆಳಾಕಳಿ ಶರನ್ನವರಾತ್ರಿ ಉತ್ಸವ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು