News Kannada
Tuesday, March 21 2023

ಉಡುಪಿ

ಕಾರ್ಕಳದ ಜನರ ಪಾಲಿಗೆ ಟಿಎಮ್ಎ ಪೈ ರೋಟರಿ ಆಸ್ಪತ್ರೆ ಬಹುದೊಡ್ಡ ಕೊಡುಗೆ- ವಿ. ಸುನಿಲ್ ಕುಮಾರ್

TMA Pai Rotary Hospital is a big gift for the people of Karkala. Sunil Kumar
Photo Credit : News Kannada

ಕಾರ್ಕಳ: ಕಾರ್ಕಳದ ಜನರ ಪಾಲಿಗೆ ಕಾರ್ಕಳದ ಮಣಿಪಾಲ ಟಿಎಮ್ಎ ಪೈ ರೋಟರಿ ಆಸ್ಪತ್ರೆ ಬಹುದೊಡ್ಡ ಕೊಡುಗೆ ಯಾಗಿದ್ದು ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದರು.

ಅವರು ಮಂಗಳವಾರ ಕಾರ್ಕಳದ ಮಣಿಪಾಲ ಟಿಎಮ್ಎ ಪೈ ರೋಟರಿ ಆಸ್ಪತ್ರೆ ಯ ವಿಸ್ತೃತವಾದ ಆಸ್ಪತ್ರೆಯ ಕೆ ಕೃಷ್ಣ ಪ್ರಭು ಒಪಿಡಿ ಬ್ಲಾಕ್ ಮತ್ತು ಹೊಸ ಆಪರೇಷನ್ ಥಿಯೇಟರ್ ಕಾಂಪ್ಲೆಕ್ಸ್ ನ ಉದ್ಘಾಟನೆ ಮಾತನಾಡಿದರು. ಮಣಿಪಾಲ ಆಸ್ಪತ್ರೆಗಳು ಆರೋಗ್ಯ ಸೇವೆಗೆ ಭದ್ರತೆ ನೀಡುತ್ತಿದೆ. ಮೂಲಭೂತ ಸೌಕರ್ಯಗಳಲ್ಲಿ ಆರೋಗ್ಯವು ಮುಖ್ಯವಾಗಿದೆ. ಕೋವಿಡ್ ಸಮಯದಲ್ಲಿ ಮಣಿಪಾಲ ಅಸ್ಪತ್ತೆಯ ಸೇವೆ ಅಭಿನಂದನೀಯವಾಗಿದೆ ಎಂದು ಹೇಳಿದರು.

ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಮಾತನಾಡಿ ಕಾರ್ಕಳ ತಾಲೂಕಿಗೆ ತಜ್ಞ ವೈದ್ಯಕೀಯ ವ್ಯವಸ್ಥೆ ಯು ಸ್ಥಳೀಯ ನೀಡಲಾಗುತ್ತಿದೆ. ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ ನವೀಕರಣ ಮಾಡಲಾಗಿದೆ ಎಂದರು.

ಮಾಹೆ ಮಣಿಪಾಲಸಹ ಕುಲಾಧಿಪತಿಗಳು ಡಾ. ಎಚ್.ಎಸ್. ಬಲ್ಲಾಳ್ , ಮಾತನಾಡಿ ಸದ್ಯದಲ್ಲೇ ಈ ಅಸ್ಪ ಪ್ರೆಯು ಅತ್ಯಂತ ಸುಸಜ್ಜಿತ ಆಸ್ಪತ್ರೆಯಾಗಿ ಮೆಲ್ದರ್ಜೆಗೆ ಏರಲಿದೆ. ಕೋವಿಡ್ ಸಮಯದಲ್ಲಿ ಉಡುಪಿಯ ಟಿ ಎಂ ಪೈ ಆಸ್ಪತ್ರೆ ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೋವಿಡ್ ಆಸ್ಪತ್ರೆ ಯನ್ನಾಗಿ ಪರಿವರ್ತಿಸುವ ಮೂಲಕ ಜನರ ಮೆಚ್ಚುಗೆ ಗೆ ಪಾತ್ರವಾಗಿತ್ತು ಎಂದರು.

ಕಾರ್ಕಳ ಆಸ್ಪತ್ರೆಯ ವಿಸ್ತರಣೆಯು ಕಾರ್ಕಳ ಮತ್ತು ಸುತ್ತಮುತ್ತಲಿನ ಜನರಿಗೆ ಕೈಗೆಟುಕುವ ಮತ್ತು ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸುವ ನಮ್ಮ ಬದ್ಧತೆಯ ಮಹತ್ವದ ಮೈಲಿಗಲ್ಲು. ಹೊಸ ಸೌಲಭ್ಯಗಳು, ಉಪಕರಣಗಳು ಮತ್ತು ಸೇವೆಗಳೊಂದಿಗೆ, ನಾವು ನಮ್ಮ ರೋಗಿಗಳಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು. ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಉಪಸ್ಥಿತರಿದ್ದರು. ಕೀರ್ತಿನಾಥ ಬಲ್ಲಾಳ ಸ್ವಾಗತಿಸಿದರು. ಸಹಕುಲಪತಿ ಡಾ ಶರತ್ ಕುಮಾರ್ ರಾವ್ ಪ್ರಸ್ತಾವನೆ ಗೈದರು. ಡಾ.ಸಂಜಯ್ ಪ್ರಭು ಧನ್ಯವಾದ ವಿತ್ತರು.

See also  ನವದೆಹಲಿ: ಸಿಡಬ್ಲ್ಯೂಸಿ ಸದಸ್ಯರು ನನ್ನನ್ನು ಅವಮಾನಿಸಿದ್ದಾರೆ ಎಂದ ಗುಲಾಂ ನಬಿ ಆಜಾದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು