News Kannada
Thursday, March 23 2023

ಉಡುಪಿ

ಮಂಗಳೂರು-ಮುಂಬೈ ಎಕ್ಸ್ ಪ್ರೆಸ್ ರೈಲಿನಲ್ಲಿ ಕಳ್ಳತನ ಪ್ರಕರಣ: ಕಳ್ಳಿಯರ ಬಂಧನ

Theft case on Mangaluru-Mumbai Express train: Katarnak thieves arrested
Photo Credit : News Kannada

ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಮಾ.14ರಂದು ಮಧ್ಯಾಹ್ನ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದ 4 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಇಬ್ಬರು ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಕಳ್ಳಿಯರನ್ನು ಭದ್ರಾವತಿ‌ ತಾಲೂಕಿನ ಹನುಮಂತ ನಗರದ ನಿವಾಸಿಗಳಾದ 41ವರ್ಷದ ಲಲಿತಾ ಬೋವಿ ಹಾಗೂ 64ವರ್ಷದ ಸುಶೀಲಮ್ಮ ಬೋವಿ ಎಂದು ಗುರುತಿಸಲಾಗಿದೆ. ಕಾಪು ತಾಲೂಕಿನ ಕುತ್ತಾರು ಗ್ರಾಮದ ಪುನೀತ್ ವಸಂತ್ ಹೆಗ್ಡೆ ಅವರು ಮಾ.14ರಂದು ಮಧ್ಯಾಹ್ನ ತಮ್ಮ ಕುಟುಂಬದೊಂದಿಗೆ ಮುಂಬೈಗೆ ತೆರಳಲು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು‌ ಹತ್ತಿದ್ದರು. ಬಳಿಕ‌ ಸೀಟ್ ಕುಳಿತು‌ ಬ್ಯಾಗ್ ನೋಡಿದಾಗ ಆಭರಣಗಳು ಕಳವಾಗಿರುವುದು ಗೊತ್ತಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಯಾಚರಣೆ ಇಳಿದ ಪೊಲೀಸರು, ರೈಲ್ವೆ ಪೊಲೀಸರ ಸಹಕಾರದೊಂದಿಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ 8 ಗಂಟೆಗಳೊಳಗೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಕಳವಾದ 4.03 ಲಕ್ಷ ರೂ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

See also  ಡಿ.18ರಂದು ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ರಜತ ಸಂಭ್ರಮ ಸಮಾರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು