News Kannada
ಉಡುಪಿ

ಉಡುಪಿ: ಕಳ್ಳತನ ಪ್ರಕರಣಗಳಲ್ಲಿ ವಶಪಡಿಸಿಕೊಂಡ 74.52 ಲಕ್ಷ ರೂ. ಮೌಲ್ಯದ ಸೊತ್ತುಗಳ ಹಸ್ತಾಂತರ

Udupi: Rs 74.52 lakh seized in theft cases Transfer of valuable assets
Photo Credit : News Kannada

ಉಡುಪಿ: ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ಚಿನ್ನಾಭರಣಗಳನ್ನು ಹಾಗೂ ಸೊತ್ತುಗಳನ್ನು ಸಂಬಂಧಿಸಿದ ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮವು ಉಡುಪಿಯ ಪೊಲೀಸ್ ಕವಾಯತ್ತು ಮೈದಾನದಲ್ಲಿ ಇಂದು ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರು ವಾರಸುದಾರರಿಗೆ ಸೊತ್ತುಗಳನ್ನು ಹಸ್ತಾಂತರಿಸಿದರು. ಕಾರ್ಕಳ ಗ್ರಾಮಾಂತರ ಠಾಣೆ, ಹಿರಿಯಡ್ಕ, ಬೈಂದೂರು, ಕೊಲ್ಲೂರು, ಕಾಪು ಠಾಣೆಗಳ ತಲಾ ಒಂದು ಪ್ರಕರಣ,  ಕೋಟ, ಮಲ್ಪೆ, ಠಾಣೆಯ ತಲಾ 2 ಪ್ರಕರಣಗಳು, ಉಡುಪಿ ನಗರ 3, ಕುಂದಾಪುರ 5, ಪಡುಬಿದ್ರಿ 4, ಕುಂದಾಪುರ ಗ್ರಾಮಾಂತರ 4, ಬ್ರಹ್ಮಾವರ 5 ಹಾಗೂ ಮಣಿಪಾಲ ಠಾಣೆಯ 10 ಪ್ರಕರಣಗಳು ಸೇರಿ ಒಟ್ಟು 40 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಒಟ್ಟು 74,52,170 ಮೌಲ್ಯದ ಸೊತ್ತುಗಳನ್ನು ಹಸ್ತಾಂತರ ಮಾಡಲಾಯಿತು.

ಎಎಸ್ಪಿ ಎಸ್‌.ಟಿ. ಸಿದ್ದಲಿಂಗಪ್ಪ, ಉಡುಪಿ ಡಿವೈಎಸ್ಪಿ ದಿನಕರ ಪಿ.ಕೆ., ಕುಂದಾಪುರ ಡಿವೈಎಸ್ಪಿ‌ ಕೆ.ಯು. ಬೆಳ್ಳಿಯಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಉಪಸ್ಥಿತರಿದ್ದರು.

See also  ಕಾರ್ಕಳದಲ್ಲಿ ಮಾ. 10 ರಿಂದ 20ರವರೆಗೆ ಕಾರ್ಕಳ ಉತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು