News Kannada
Tuesday, June 06 2023
ಉಡುಪಿ

ಕಾರ್ಕಳ:  ಶ್ರವಣಬೆಳಗೊಳ ಸ್ವಸ್ತಿ ಶ್ರೀ ಜಗದ್ಗುರು ಚಾರುಕೀರ್ತಿ ಸ್ವಾಮೀಜಿ ಜಿನೈಕ್ಯ

Shravanabelagola Swasthi Sri Jagadguru Charukeerthi Swamiji Jinaikya
Photo Credit :

ಕಾರ್ಕಳ: ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಜಗದ್ಗುರು ಚಾರುಕೀರ್ತಿ ಸ್ವಾಮೀಜಿ ಜಿನೈಕ್ಯ ಆಗಿದ್ದಾರೆ. 1970, ಏಪ್ರಿಲ್‌ 19ರಂದು ಪಟ್ಟಾಭೀಷಿಕ್ತರಾದ ಸ್ವಾಮೀಜಿ ಸುಮಾರು 50 ವರ್ಷಗಳಿಂದ ಮಠವನ್ನು ಮುನ್ನಡೆಸಿದ್ದಾರೆ.

ನಾಲ್ಕು ಮಹಾ ಮಸ್ತಕಾಭಿಷೇಕ ಪೂರೈಸಿದ ಕೀರ್ತಿ ಸ್ವಾಮೀಜಿಗಿದೆ. ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಸ್ವಾಮೀಜಿ ಕೊಡುಗೆ ಅಗಣಿತ. ಸಮಾಜಮುಖಿ ಕಾರ್ಯಗಳಿಂದ ಶ್ರವಣಬೆಳಗೊಲ ಸುತ್ತಮುತ್ತಲಿನ ಎಲ್ಲ ಧರ್ಮದವರ ಬದುಕು ಸುಧಾರಿಸಲು ಬಹಳಷ್ಟು ಕೆಲಸ ಮಾಡಿದ್ದ ಸ್ವಾಮೀಜಿ ಉನ್ನತ ಗೌರವಕ್ಕೆ ಪಾತ್ರರಾಗಿದ್ದರು.

ಸ್ವಾಮೀಜಿ ಮೂಲತಃ ಹೆಬ್ರಿ ಸಮೀಪದ ವರಂಗದವರು. ಶಿಕ್ಷಕ ದಂಪತಿಯ ಪುತ್ರನಾಗಿ 1949, ಮೇ 3ರಂದು ಜನಿಸಿದರು. ಕನ್ನಡ, ಸಂಸ್ಕೃತ ಮತ್ತು ಪ್ರಾಕೃತ ಭಾಷೆಗಳಲ್ಲಿ ಅವರು ಪಾಂಡಿತ್ಯ ಗಳಸಿದ್ದರು. ಇತಿಹಾಸ ಮತ್ತು ತತ್ವಶಾಸ್ತ್ರದಲ್ಲಿ ಮೈಸೂರು ಮತ್ತು ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದರು.

30ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೋದ್ಧಾರಗೊಳಿಸಿದ ಮತ್ತು ಅಸಂಖ್ಯಾತ ದೇವಳಗಳಿಗೆ ನೆರವು ನೀಡಿದ ಹಿರಿಮೆ ಸ್ವಾಮೀಜಿಯವರಿಗಿದೆ.
1981, 1993, 2006 ಮತ್ತು 2018ರಲ್ಲಿ ಮಹಾಮಸ್ತಕಾಭಿಷೇಕ ನೆರವೇರಿಸಿದ ಹಿರಿಮೆಗೆ ಅವರು ಪಾತ್ರರಾಗಿದ್ದಾರೆ. 1970ರಲ್ಲಿ ಶ್ರವಣಬೆಳಗೊಳಕ್ಕೆ ಭೇಟಿ ನೀಡಿದ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರು ಕರ್ಮಯೋಗಿ ಬಿರುದು ಇತ್ತು ಗೌರವಿಸಿದ್ದರು.

ಉತ್ತಮ ಪ್ರವಚನಕಾರ ಮತ್ತು ವಾಗ್ಮಿಯಾಗಿದ್ದ ಸ್ವಾಮೀಜಿಯವರು ಕನ್ನಡ, ಹಿಂದಿ ಮತ್ತು ಇಂಗ್ಲೀಷ್‌ನಲ್ಲಿ ನಿರರ್ಘಳವಾಗಿ ಮಾತನಾಡುತ್ತಿದ್ದರು.

See also  ಸರಳೆಬೆಟ್ಟುವಿನಲ್ಲಿ 460 ಮನೆಗಳ ನಿರ್ಮಾಣ ಕಾಮಗಾರಿ: ಶಾಸಕ ರಘುಪತಿ ಭಟ್ ಪರಿಶೀಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು