News Kannada
Monday, October 02 2023
ಉಡುಪಿ

ಕುಂದಾಪುರ: ಲಾಲ್ ಬಹದ್ದೂರ್ ಶಾಸ್ತ್ರಿ ಕಂಚಿನ ಪುತ್ಥಳಿ ಅನಾವರಣ

Kundapur: Bronze statue of Lal Bahadur Shastri unveiled
Photo Credit : Wikipedia

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಗರದ ಪ್ರವೇಶದ್ವಾರದಲ್ಲಿ ನವೀಕೃತ ಶಾಸಿ ವೃತ್ತ ಉದ್ಘಾಟನೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಗಳ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್‍ಯಕ್ರಮ ಶನಿವಾರ ಸಂಜೆ ನಡೆಯಿತು.

ಶಾಸ್ತ್ರಿಜಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಕುಂದಾಪುರ ಪುರಸಭಾಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ಸಾರ್ವಜನಿಕರು, ಸಂಘ-ಸಂಸ್ಥೆಗಳು, ಪುರಸಭೆಯ ಸದಸ್ಯರ ಸಲಹೆಯಂತೆ ಕುಂದಾಪುರ ಶಾಸ್ತ್ರೀ ಸರ್ಕಲ್ ಅನ್ನು ನವೀಕರಿಸಲಾಗಿದೆ, ಅದರೊಂದಿಗೆ ದೇಶ ಕಂಡ ಮಹಾನ್ ನಾಯಕರಲ್ಲಿ ಒಬ್ಬರಾದ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಈ ಹಿಂದೆ ಇದ್ದ ಕಲ್ಲಿನ ಮಾದರಿಯ ಪ್ರತಿಮೆಯನ್ನು ಬದಲಿಸಿ ಕಂಚಿನ ಪುತ್ಥಳಿಯನ್ನು ಹೊಸದಾಗಿ ನಿರ್ಮಿಸಲಾಗಿದೆ. ಈ ಹಿಂದೆ 1963 ರಲ್ಲಿ ನಿರ್ಮಿಸಿದ್ದ ಸರ್ಕಲ್ ಹಾಗೂ ಪುತ್ಥಳಿಗೆ ಚಾರ್ಮಕ್ಕಿ ನಾರಾಯಣ ಶೆಟ್ಟರು ಸಹಕರಿಸಿದ್ದರು.ಈ ಬಾರಿಯೂ ಅವರ ಮನೆಯವರು ಕಂಚಿನ ಪ್ರತಿಮೆಯನ್ನು ಕೊಡುಗೆಯಾಗಿ ನೀಡಿದ್ದಾರೆ.ಇನ್ನು ಸರ್ಕಲ್ ರೂಪುಗೊಳ್ಳುವಲ್ಲಿ ಶಾಸಕರು, ಪುರಸಭೆಯ ಸದಸ್ಯರು, ಅಧಿಕಾರಿಗಳ ಸಹಕಾರ ಪ್ರಮುಖವಾದುದು ಎಂದವರು ಸ್ಮರಿಸಿದರು.

ಪುರಸಭೆ ವಿಪಕ್ಷ ಸದಸ್ಯ ಚಂದ್ರಶೇಖರ ಖಾರ್ವಿ ಮಾತನಾಡಿ ಸುಂದರ ಕುಂದಾಪುರಕ್ಕೆ ಈ ನವೀಕೃತ ಸರ್ಕಲ್ ಕಲಶಪ್ರಾಯವಿದ್ದಂತೆ. ನಾವೆಲ್ಲ ಅಂದುಕೊಂಡಂತೆಯೇ ಸರ್ಕಲ್ ರೂಪುಗೊಂಡಿದೆ ಎಂದು ಹೇಳಿದರು.

ಪುರಸಭೆ ಉಪಾಧ್ಯಕ್ಷ ಸಂದೀಪ್ ಖಾರ್ವಿ, ಪುರಸಭೆಯ ಹಿಂದಿನ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ,ಪ್ರತಿಮೆ ನಿರ್ಮಿಸಿದ ಶಿಲ್ಪಿ ಶ್ರೀತಿನ್ ಶೆಟ್ಟಿಗಾರ್ ಬಂಟ್ವಾಡಿ, ಗಾರ್ಡನ್ ನಿರ್ಮಿಸಿದ ವಿವೇಕ್ ಅವರನ್ನು ಸಮ್ಮಾನಿಸಲಾಯಿತು.

ಹಿರಿಯ ಸದಸ್ಯ ಮೋಹನ್ ದಾಸ್ ಶೆಣೈ,ನಗರ ಯೋಜನಾ ಪ್ರಧಿಕಾರದ ಅಧ್ಯಕ್ಷ ವಿಜಯ ಎಸ್. ಪೂಜಾರಿ,ಪುರಸಭೆಯ ಸದಸ್ಯರು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು, ಅಧಿಕಾರಿಗಳು,ಸಿಬಂದಿ,ವಿವಿಧ ಪಕ್ಷಗಳ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಸ್ವಾಗತಿಸಿದರು, ಉಪನ್ಯಾಸಕ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್‍ಯಕ್ರಮ ನಿರೂಪಿಸಿದರು.

See also  ಉಡುಪಿ: ಜಿಲ್ಲೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ರಕ್ಷಣೆಗೆ ಉತ್ತಮ ಸಹಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು