ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಇಕೋ ಕ್ಲಬ್ ಸಹಭಾಗಿತ್ವದಲ್ಲಿ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸಂವಾದ ಕಾರ್ಯಕ್ರಮ ನಡೆಯಿತು.
ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರಾದ ರಾಜೇಂದ್ರ ಕಲ್ಬಾವಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ನೀರಿನ ಮಹತ್ವ ಮತ್ತು ಸಂರಕ್ಷಣೆ ವಿಷಯದ ಕುರಿತು ಮಾಹಿತಿ ನೀಡಿ ಮಾತನಾಡಿದ ಅವರು ನೀರನ್ನು ಜೀವ ಜಲ ಎಂದು ಕರೆಯುತ್ತಾರೆ ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ನೀರಿನ ಅಭಾವದ ಕುರಿತು ಕಳವಳ ವ್ಯಕ್ತಪಡಿಸುತ್ತಾ ನೀರಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಬಗ್ಗೆ ವಿವರಿಸಿದರು.
ಐಎಮ್ ಜೆ ವಿದ್ಯಾಸಂಸ್ಥೆಯ ನಿರ್ದೇಶಕರಾದ ಪ್ರೊಫ಼ೆಸರ್ ದೋಮ ಚಂದ್ರಶೇಖರ ಮಾತನಾಡಿ ಮುಂದಿನ ಪೀಳಿಗೆಗೆ ನೀರನ್ನು ಕಾಯ್ದಿರಿಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ. ವಿದ್ಯಾರ್ಥಿಗಳು ಆ ಕುರಿತು ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.
ಕಾಲೇಜಿನ ಪ್ರಿನ್ಸಿಪಾಲ್ ಡಾ.ಅಬ್ದುಲ್ ಕರೀಮ್,ಉಪ ಪ್ರಿನ್ಸಿಪಾಲ್ ಪ್ರೊ. ಮೆಲ್ವಿನ್ ಡಿ ಸೋಜಾ,ಐಎಮ್ ಜೆಐ ಎಸ್ ಸಿ ಕಾಲೇಜಿನ ಪ್ರಾಂಶುಪಾಲೆ ಡಾ ಪ್ರತಿಭ ಪಟೇಲ್, ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗ್ಡೆ,ಸಿವಿಲ್ ವಿಭಾಗದ ಮುಖ್ಯಸ್ಥ ಪ್ರೊಫ಼ೆಸರ್ ಪ್ರಶಾಂತ ಹೆಗ್ಡೆ, ಸಿಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿ ಪ್ರಥಮ್ ಮೈಕೆಲ್ ಕಾರ್ಯಕ್ರಮ ನಿರೂಪಿಸಿದರು, ಆಮೆ ನಾಂಗ್ಬೋ ವಂದಿಸಿದರು.