News Kannada
Saturday, June 03 2023
ಉಡುಪಿ

ಬಿ.ಎಂ ಸುಕುಮಾರ ಶೆಟ್ಟಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರ ಒತ್ತಡ

Activists pressure to give tickets to BM Sukumar Shetty
Photo Credit : News Kannada

ಕುಂದಾಪುರ: ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರಿಗೆ ಬೈಂದೂರು ವಿಧಾನಸಭೆ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೈಂದೂರು ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಬುಧವಾರ ಭೇಟಿ ಮಾಡಿ ಬೈಂದೂರು ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಯಾವುದೇ ರೀತಿಯ ಕಪ್ಪು ಚುಕ್ಕಿ ಇಲ್ಲದೆ ಕ್ಷೇತ್ರದ ಜನರೊಂದಿಗೆ ಓಡನಾಟವನ್ನು ಹೊಂದಿರುವ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರನ್ನು ಕಡೆಗಣಿಸಲು ಕಾರಣ ಏನೆಂದು ಸಂಸದರನ್ನು ಪದಾಧಿಕಾರಿಗಳು ಪ್ರಶ್ನೆಯನ್ನು ಮಾಡಿದ್ದಾರೆ ಎನ್ನಲಾಗಿದೆ.

ಹಿಂದುಳಿದ ಬೈಂದೂರು ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಸಾಕಷ್ಟು ಶ್ರಮವನ್ನು ವಹಿಸಿದ್ದ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರಿಗೆ ಬೈಂದೂರು ಕ್ಷೇತ್ರದ ಟಿಕೆಟ್ ನೀಡಬೇಕೆಂದು ಸಂಸದರನ್ನು ಕಾರ್ಯಕರ್ತರು ಒತ್ತಾಯಿಸಿದರು.ಬೈಂದೂರು ಕ್ಷೇತ್ರದ ಪದಾಧಿಕಾರಿಗಳ ಅಭಿಪ್ರಾಯಕ್ಕೆ ಸ್ಪಂದನೆ ಮಾಡಿದ ಸಂಸದರು ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ ಎನ್ನಲಾಗುತ್ತಿದೆ.

ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಸಾಲು ಸಾಲು ಸಮಾವೇಶಗಳನ್ನು ಸಂಘಟಿಸಿ ಪಕ್ಷವನ್ನು ಬಲಪಡಿಸಲು ಶಾಸಕರು ಬಹಳಷ್ಟು ಶ್ರಮವನ್ನು ವಹಿಸಿದ್ದಾರೆ ಮಾತ್ರವಲ್ಲದೆ ಸರಕಾರದ ಜನಪಯೋಗಿ ಕೆಲಸಗಳನ್ನು ಕೈಪಿಡಿಯ ಮೂಲಕ ಮನೆ ಮನೆಗೆ ತಲುಪಿಸಲು ವಿಶೇಷವಾದ ಪ್ರಯತ್ನವನ್ನು ಮಾಡಿದ್ದಾರೆ ಎಂದು ಶಾಸಕರ ಕಾರ್ಯಗಳ ಬಗ್ಗೆ ಅವರ ಅಭಿಮಾನಿಗಳು ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬಿ.ಎಂ ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅವರ ಅಭಿಮಾನಿಗಳು ಪಕ್ಷದ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸೇರಿದಂತೆ ಮಂಡಲದ 100ಕ್ಕೂ ಅಧಿಕ ವಿವಿಧ ಮೋರ್ಚಾದ ಪದಾಧಿಕಾರಿಗಳು, 300 ಕ್ಕೂ ಅಧಿಕ ಕಾರ್ಯಕರ್ತರು ಸಂಸದರನ್ನು ಶಿವಮೊಗ್ಗದಲ್ಲಿ ಭೇಟಿ ಮಾಡಿ ಬಿ.ಎಂ ಸುಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಡವನ್ನು ಹೇರಿದ್ದರು.

See also  ತುಮಕೂರು: ಟಿಪ್ಪರ್ ಗೆ ಬೈಕ್ ಡಿಕ್ಕಿ, ಸವಾರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು