News Karnataka Kannada
Wednesday, April 24 2024
Cricket
ಉಡುಪಿ

ಕೊಲ್ಲುವ ಮನಸ್ಥಿತಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು: ಸುಧೀರ್ ಕುಮಾರ್ ಮುರೊಳ್ಳಿ

A person with a killing mentality should not become an MLA from Udupi: Sudhir Kumar Maroli 
Photo Credit : News Kannada

ಉಡುಪಿ: ಕೊಲ್ಲುವ ಮನಸ್ಥಿತಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು. ಒಂಬತ್ತು ಪುಟಗಳ ಕ್ರಿಮಿನಲ್ ಕೇಸುಗಳ ವರದಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು. ಪುಂಡಾಟಿಕೆಯಲ್ಲಿ ಮುಂಚೂಣಿಯಲ್ಲಿದ್ದ ವ್ಯಕ್ತಿ ಉಡುಪಿಯ ಶಾಸಕನಾಗುತ್ತಾನೆಂದರೆ ಅದು ಉಡುಪಿಯ ಸ್ವಾಭಿಮಾನದ ಪ್ರಶ್ನೆ.” ಎಂದು ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್  ಮುರೊಳ್ಳಿ ಹೇಳಿದ್ದಾರೆ.

ಪರ್ಕಳದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿ ಮತ್ತು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು.

” ಬಿಜೆಪಿಗೆ ನೂರು ಜನ್ಮವೆತ್ತಿ ಬಂದರೂ ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ. ಕ್ಷೀರ ಭಾಗ್ಯ, ಅನ್ನ ಭಾಗ್ಯ, ಲ್ಯಾಪ್ಟಾಪ್, ಶೂ ಭಾಗ್ಯ, ಮನಸ್ವಿನಿ ಮುಂತಾದ 167 ಭರವಸೆಯನ್ನು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಈಡೇರಿಸಿದೆ. ಮನೆ (ನಿವೇಶನ), ಸಾಲಮನ್ನಾ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಉದ್ಯೋಗ ಕೊಡಿ ಅಂದರೆ ಬಿಜೆಪಿಗರು ಜಟ್ಕಾ-ಹಲಾಲ್ ಕಟ್, ಹಿಜಾಬ್-ಅಜಾನ್ ಎನ್ನುತ್ತಾರೆ. ಗೋವಾದಲ್ಲಿ ಬಿಜೆಪಿ ಸರ್ಕಾರ ಶ್ರೀರಾಮ ಸೇನೆಯನ್ನು ನಿಷೇಧಿಸಿತ್ತು. ಇದಕ್ಕೆ ಬಿಜೆಪಿ ಉತ್ತರ ಕೊಡಬೇಕು.” ಎಂದರು.

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ” ಜನರಿಗೆ ನೀರಿಲ್ಲ, ಉದ್ಯೋಗವಿಲ್ಲ, ಡ್ರೈನೇಜ್ ಆಗಿಲ್ಲ ಎಂದು ಜನರು ಅಳುತ್ತಿದ್ದಾರೆ. ಇದೆಲ್ಲದಕ್ಕೂ ಪರಿಹಾರವಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಅನಿವಾರ್ಯತೆ ಇದೆ. ವರ್ಷದಲ್ಲಿ ಸುಮಾರು 27,000 ಯುವಕರು ಪದವಿ ಮುಗಿಸಿ ಹೊರಬರುತ್ತಾರೆ. ಯುವಕರ ಉದ್ಯೋಗಕ್ಕಾಗಿ ಯಾವುದೇ ಒಂದು  ಕೈಗಾರಿಕೆ ಸ್ಥಾಪಿಸಿಲ್ಲ. ಇಂತಹ  ಕಾರಣಕ್ಕೆ ಈ  ಭ್ರಷ್ಟ ಸರಕಾರವನ್ನು ಸೋಲಿಸಬೇಕು. ಪ್ರವಾಸೋದ್ಯಮದಲ್ಲಿ ಕಮಿಷನ್ ಏಜೆಂಟರಂತೆ ಬಿಜೆಪಿ ವರ್ತಿಸುತ್ತಿದೆ. ಬಿಜೆಪಿ ಮೀನುಗಾರಿಕಾ ಜಟ್ಟಿಯನ್ನು ಅಭಿವೃದ್ಧಿಪಡಿಸಿಲ್ಲ. ನಾಡದೋಣಿಗೆ ಸೀಮೆ ಎಣ್ಣೆ ನೀಡಲಿಲ್ಲ. ಕೃಷಿಕರಿಗೂ ಬಿಜೆಪಿ ಯಾವುದೇ ಉತ್ತೇಜನ ನೀಡಿಲ್ಲ.” ಎಂದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಸುಕೇಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು