ಕುಂದಾಪುರ: ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ನಿವಾಸಿ ಎಂ.ಕಾಂ ಪದವೀಧರೆ ಗೌತಮಿ ಶೆಟ್ಟಿ (22) ಡೆತ್ ನೋಟ್ ಬರೆದಿಟ್ಟು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಎಂ.ಕಾಂ ಪದವೀಧರೆಯಾಗಿದ್ದ ಗೌತಮಿ ಶೆಟ್ಟಿ ಅವರು ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದರು, ಪರೀಕ್ಷೆ ಬರೆದಿದ್ದರು ಉದ್ಯೋಗ ಸಿಗದ ಹಿನ್ನಲೆಯಲ್ಲಿ ಮನನೊಂದು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.ಈ ಸಂಬಂಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.