News Karnataka Kannada
Tuesday, April 23 2024
Cricket
ಉಡುಪಿ

ಉದ್ಯೋಗ ಸೃಷ್ಠಿಸುವಲ್ಲಿ ಬಿಜೆಪಿ ಸಂಪೂರ್ಣ ವೈಫಲ್ಯ ಕಂಡಿದೆ: ಪ್ರಸಾದ್ ರಾಜ್ ಕಾಂಚನ್

BJP has completely failed to create jobs: Prasad Raj Kanchan
Photo Credit : News Kannada

ಉಡುಪಿ: ಜನಾರ್ಧನ್ ಪೂಜಾರಿಯವರು ಹಣಕಾಸು ಮಂತ್ರಿಯಾಗಿದ್ದಾಗ ಬ್ಯಾಂಕಿಂಗ್ ವ್ಯವಸ್ಥೆ ಮೂಲಕ ಸಾಲ-ಮೇಳದಂತಹ ಯೋಜನೆಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಬಹಳ ಸಹಕಾರವನ್ನು ಮಾಡಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಲಿತ ವಿದ್ಯೆಗೆ ತಕ್ಕಂತೆ ಯುವಕರಿಗೆ ಯಾವುದೇ ಉದ್ಯೋಗ ಸೃಷ್ಠಿಗೆ ಬಿಜೆಪಿ ಅವಕಾಶವನ್ನು ಮಾಡಿಲ್ಲ. ಇಂದು ಅನುಮತಿ ಇಲ್ಲದೆ ಬಂಡೆಯನ್ನು ಕಡಿದು ಮಾರಲಾಗುತ್ತಿದೆ.” ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ಹೇಳಿದರು.

ಅವರು ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕುಂಜಾಲು ಸರ್ಕಲ್ ಬಳಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಕಾಂಗ್ರೆಸ್ ಮುಖಂಡರಾದ ದಿನಕರ್ ಹೇರೂರು, ಕೃಷ್ಣಮೂರ್ತಿ ಆಚಾರ್ಯ, ಸುಧಾಕರ್ ಶೆಟ್ಟಿ ಮೇರ್ಮಾಡಿ, ಭುಜಂಗ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಗೋಫಿ ನಾಯ್ಕ್, ಮೊದಲಾದವರು  ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು