News Karnataka Kannada
Friday, March 29 2024
Cricket
ಉಡುಪಿ

ಕುಚ್ಚಲಕ್ಕಿ ನೀಡಲಾಗದ ಬಿಜೆಪಿ ಮುಖಂಡರಿಗೆ ಅಧಿಕಾರದ ಚಡಪಡಿಕೆ: ರಮೇಶ್ ಕಾಂಚನ್

Bjp leaders who have not been given 'kuchchalakki' are restless in power: Ramesh Kanchan
Photo Credit : Facebook

ಉಡುಪಿ: ಕರಾವಳಿಗರಿಗೆ ಕುಚ್ಚಲು ಅಕ್ಕಿಯನ್ನು ವಿತರಣೆ ಮಾಡುವುದಾಗಿ ಜನರಿಗೆ ಟೋಪಿ ಹಾಕಿ ಈಗ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ದಿನನಿತ್ಯ ಮಾಧ್ಯಮಗಳಲ್ಲಿ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಎಬ್ಬಿಸುತ್ತಿರುವ ಮಾಜಿ ಸಚಿವ ಹಾಗೂ ವಿಧಾನಪರಿಷತ್‌ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರ ಸ್ಥಿತಿ ನೋಡಿ ನಿಜಕ್ಕೂ ಮರುಕಪಡುವಂತಾಗಿದೆ ಎಂದು ಉಡುಪಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.

ಸಚಿವರು ತಮ್ಮ ಬಿಜೆಪಿ ಸರಕಾರ ಇದ್ದಾಗ ಪ್ರತಿನಿಧಿ’ ಎಂಬಂತೆ ಕರಾವಳಿಗರಿಗೆ ಕುಚ್ಚಲು ಅಕ್ಕಿ ಪಡಿತರ ಕೇಂದ್ರದಲ್ಲಿ ವಿತರಿಸುವುದಾಗಿ ಹೇಳಿಕೊಂಡು ಬಂದಿದ್ದು ಬಿಟ್ಟರೆ ಕೊನೆತನಕವೂ ಅದನ್ನು ಜಾರಿಮಾಡಲು ಅವರಿಂದ ಸಾಧ್ಯವಾಗಿಲ್ಲ. ಕೊನೆಗೆ ಅವರು ಸೂಕ್ತ ಪ್ರಮಾಣದಲ್ಲಿ ಕುಚ್ಚಿಲು ಅಕ್ಕಿ ಮಾರುಕಟ್ಟೆಯಲ್ಲಿ ಲಭ್ಯವಾಗದ ಕಾರಣ ನೀಡಲು ಸಾಧ್ಯವಾಗಿಲ್ಲ ಎಂದು ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ ಎಂದರು.

ಕಾಂಗ್ರೆಸ್‌ ಪಕ್ಷ ಗ್ಯಾರೆಂಟಿ ಕಾರ್ಡ್‌ ನಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಲು ಬದ್ಧವಾಗಿದೆ ಎಂದು ಮುಖ್ಯ ಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಸಹ ಪ್ರತಿನಿತ್ಯ ಬಿಜೆಪಿಗರು ತಮ್ಮ ಕುಹಕಗಳನ್ನು ಮುಂದುವರಿಸಿದ್ದಾರೆ. ಗ್ಯಾರಂಟಿ ಕಾರ್ಡ್‌ ನಲ್ಲಿ ಭರವಸೆಗಳಿಗೆ ಸೂಕ್ತವಾದ ಹಣಕಾಸು ವ್ಯವಸ್ಥೆಯ ಬಗ್ಗೆ ಪರಿಶೀಲನೆ ಮಾಡಿ ಅದಕ್ಕೆ ಅಗತ್ಯವಾದ ಮನದಂಡಗಳನ್ನು ರಚಿಸಿ ಅಧಿಕೃತವಾಗಿ ಎರಡು ದಿನಗಳಲ್ಲಿ ಮುಖ್ಯ ಮಂತ್ರಿಗಳು ಘೋಷಣೆ ಮಾಡಲಿದ್ದಾರೆ. ಅಲ್ಲಿಯ ತನಕ ಕಾಯುವ ಬದಲು ಬಿಜೆಪಿ ಪಕ್ಷದ ನಾಯಕರು ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿರುವುದು ಅವರಿಗೆ ಅಧಿಕಾರ ಇಲ್ಲದೆ ಆಗುತ್ತಿರುವ ಚಡಪಡಿಕೆ ಎನ್ನುವುದು ಎದ್ದು ಕಾಣುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದೇಶದಲ್ಲಿರುವ ಕಪ್ಪು ಹಣ ತರುವುದಕ್ಕೆ ಸಾಧ್ಯವಾಗಿಲ್ಲ. ಬೆಲೆಯೇರಿಕೆ ಒಂದೇ ಇವರ 9 ವರ್ಷಗಳ ಸಾಧನೆ ಎಂದರು. ಹೀಗಾಗಿ ಬಡ ಜನರಿಗಾಗಿ ಕಾಂಗ್ರೆಸ್ ತಂದಿರುವ 5 ಗ್ಯಾರಂಟಿಗಳು ಜಾರಿಯಾದರೆ ಮುಂದೆ ಬಿಜೆಪಿ ಪಕ್ಷಕ್ಕೆ ನಲೆ ಇಲ್ಲದಂತಾಗುತ್ತದೆ ಎಂಬುದು ಬಿಜೆಪಿ ನಾಯಕರ ಹೆಣಗಾಟವಾಗಿದೆ.

ಬಿಜೆಪಿ ನಾಯಕರ ಮೋಸ ಕಂಡು ಈ ಬಾರಿ ಕಾಂಗ್ರೆಸ್‌ ಗೆ ಜನ ಅಧಿಕಾರ ನೀಡಿದ್ದಾರೆ. ಎಷ್ಟೇ ಕಷ್ಟವಾದರೂ ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ಗಳನ್ನು ಜಾರಿಗೊಳಿಸಲು ಬದ್ಧ ಎಂದು ರಮೇಶ್‌ ಕಾಂಚನ್‌ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು