ಪಡುಬಿದ್ರಿ: ಬಿಜೆಪಿ ಮಹಾಶಕ್ತಿ ಕೇಂದ್ರ ಪಡುಬಿದ್ರಿ ಇದರ ವತಿಯಿಂದ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು.
ಪಡುಬಿದ್ರಿ ನಯತ್ ಹೋಟೆಲ್ ಸಭಾಂಗಣದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಯವರಿಗೆ ಅಭಿಮಾನಿಗಳು ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಮಾಜಿ ಶಾಸಕ ಲಾಲಾಜಿ ಮೆಂಡನ್ ರವರು ಸಮ್ಮಾನಿಸಿದರು. ಬಳಿಕ ನಿಕಟಪೂರ್ವ ಶಾಸಕ ಮೆಂಡನ್ ಮಾತನಾಡಿ ನನ್ನ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯ ಕ್ಕಿಂತ ಹೆಚ್ಚಿನ ಕಾರ್ಯಗಳನ್ನು ಸುರೇಶ್ ಶೆಟ್ಟಿಯವರ ಅವಧಿಯಲ್ಲಿ ಜರಗಲಿ ಎಂದು ಶುಭ ಹಾರೈಸಿದರು.
ಸಮ್ಮಾನ ಸ್ವೀಕರಿಸಿದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಕಾರ್ಯಕರ್ತರು ಹಗಲಿರುಳು ಮಾಡಿದ ಶ್ರಮದ ಫಲವಾಗಿ ನನಗೆ ಚುನಾವಣೆಯಲ್ಲಿ ಜಯ ಲಭಿಸಿದೆ. ಆದರೆ ಈ ಜಯವನ್ನು ಕಾರ್ಯಕರ್ತರಿಗೆ ಮತ್ತು ಮತದಾರ ಬಂದುಗಳಿಗೆ ಅರ್ಪಿಸುತ್ತೇನೆ ,ನಮ್ಮ ಸರ್ಕಾರ ಬರಬೇಕಿತ್ತು ಆದರೆ ಬರಲಿಲ್ಲ. ಆದರೂ ನಾನು ಶಾಸಕನ ನೆಲೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಪಣತೊಟ್ಟು ನೆರವೇರಿಸಲು ಬದ್ಧನಾಗಿದ್ದೇನೆ ಎಂದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ರಾವ್, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಪ್ರಭು, ಧಾರ್ಮಿಕ ಮುಖಂಡ ಗುಣಕರ್ ಶೆಟ್ಟಿ, ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಕೇಶವ ಮೋಯ್ಲಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.