News Kannada
Tuesday, September 26 2023
ಉಡುಪಿ

ಮಣಿಪಾಲದಲ್ಲಿ ಬುಲ್ಡೋಜರ್ ಹರಿಸಿ ಕರ್ಕಶ ಸೈಲೆನ್ಸರ್ ನಾಶ

Bulldozer blows up in Manipal, destroys silencer
Photo Credit : News Kannada

ಮಣಿಪಾಲ: ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಿನಿಂದ ಕಾರ್ಯಾಚರಣೆ ನಡೆಸಿ ಅನಧಿಕೃತ ಸೈಲೆನ್ಸರ್ ಅಳವಡಿಕೆ ಮಾಡಿದ್ದ ವಾಹನಗಳಿಗೆ ದಂಡ ವಿಧಿಸಿ ವಶಪಡಿಸಿಕೊಂಡ ಸೈಲೆನ್ಸರ್‌ಗಳನ್ನು ಇಂದು ಜೆಸಿಬಿ ವಾಹನದ ಮೂಲಕ ನಿಷ್ಕ್ರಿಯಗೊಳಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ನಿರ್ದೇಶನದ ಮೇರೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಲಿಂಗಪ್ಪ, ಉಡುಪಿ ಡಿವೈಎಸ್‌ಪಿ ದಿನಕರ ಮತ್ತು ಮಣಿಪಾಲ ಠಾಣಾಧಿಕಾರಿ ದೇವರಾಜ ಟಿವಿ ಉಪಸ್ಥಿತಿಯಲ್ಲಿ ಕಳೆದ 6 ತಿಂಗಳಿನಿಂದ ಮಣಿಪಾಲದ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗಿತ್ತು.

ಮಾರ್ಪಾಡಿಸಿದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಸುಮಾರು 60ರಿಂದ 70 ದ್ವಿಚಕ್ರ ವಾಹನ ಸವಾರರಿಗೆ ತಲಾ 500 ರೂ.ನಂತೆ ದಂಡ ವಿಧಿಸಲಾಗಿತ್ತು. ಅಲ್ಲದೆ, ಆಲ್ಟ್ರೇಷನ್ ಮಾಡಿಸಿದ್ದ 4 ವಾಹನಗಳನ್ನು ವಶಪಡಿಸಿ ಆರ್‌ಟಿಓ ಮೂಲಕ 60 ಸಾವಿರ ರೂ.ದಂಡ ವಿಧಿಸಲಾಗಿದೆ. ವಾರಾಂತ್ಯದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ವ್ಹೀಲಿಂಗ್ ನಡೆಸುವುದು ಹಾಗೂ ನಿಯಮಾವಳಿ ಉಲ್ಲಂಘಿಸುವವರ ಮೇಲೆ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಲಿಂಗಪ್ಪ ತಿಳಿಸಿದ್ದಾರೆ. ಡಿವೈಎಸ್‌ಪಿ ದಿನಕರ, ಎಎಸ್‌ಐ ನವೀನ್ ನಾಯಕ್‌ ಉಪಸ್ಥಿತರಿದ್ದರು.

See also  ಉಡುಪಿ: ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಶಾಸಕರಿಂದ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು