News Kannada
Monday, October 02 2023
ಉಡುಪಿ

ಬೈಂದೂರು ರಾಮಕ್ಷತ್ರಿಯ ಸಮಾಜ ವತಿಯಿಂದ ಶಾಸಕ ಗುರುರಾಜ್ ಗಂಟಿಹೊಳೆಗೆ ಸನ್ಮಾನ

Byndoor Ramkshatriya Samaj felicitates MLA Gururaj Gantihole
Photo Credit : News Kannada

ಕುಂದಾಪುರ: ರಾಮಕ್ಷತ್ರಿಯ ಸಮಾಜ ಸೀತಾರಾಮಚಂದ್ರ ದೇವಸ್ಥಾನ ಬೈಂದೂರು ವತಿಯಿಂದ ಬೈಂದೂರು ವಿಧಾನಸಭೆ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರನ್ನು ಬೈಂದೂರು ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಶಾಸಕ ಗುರುರಾಜ್ ಗಂಟಿಹೊಳೆ ಅಭಿನಂದನೆ ಸ್ವೀಕರಿಸಿ ಮಾತನಾಡಿ,ಚುನಾವಣೆಯ ಸಂದರ್ಭದಲ್ಲಿ ರಾಮಕ್ಷತ್ರೀಯ ಸಮಾಜ ನನ್ನ ಬೆಂಬಲಕ್ಕೆ ನಿಂತು ಪ್ರೀತಿಯಿಂದ ಕೈಹಿಡಿದು ಗೆಲ್ಲಿಸಿದ್ದೀರಿ,ನಿಮ್ಮೆಲ್ಲರ ಆರ್ಶೀವಾದದಿಂದ ಸಾಮಾನ್ಯ ಕಾರ್ಯಕರ್ತನಾದ ನಾನು ಶಾಸಕನಾಗಿ ನಿಮ್ಮೆದುರು ನಿಂತಿದ್ದೇನೆ.ರಾಮಕ್ಷತ್ರೀಯ ಸಮಾಜದ ನಿವೃತ್ತ ಅಧ್ಯಾಪಕರು ಹಾಗೂ ಮಾಜಿ ಶಾಸಕ ಕೆ ಲಕ್ಷ್ಮೀನಾರಾಯಣರವರ ಬೆಂಬಲವನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳುವುದು ಬಹಳ ಮುಖ್ಯ ಎಂದರು.

ಬೈಂದೂರು ರಾಮಕ್ಷತ್ರಿಯ ಸಮಾಜದ ಅಧ್ಯಕ್ಷ ರಾಮಕೃಷ್ಣ ಸಿ ಅಭಿನಂದನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಬೈಂದೂರು ಬಿ.ಜೆ.ಪಿ ಮಂಡಲ ಅಧ್ಯಕ್ಷ ದೀಪಕ್‌ ಕುಮಾರ್ ಶೆಟ್ಟಿ,ರಾಮಕ್ಷತ್ರಿಯ ಸಮಾಜದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು,ಸಮಾಜದ ಮುಖಂಡರು,ರಾಮಕ್ಷತ್ರಿಯ ಸಮಾಜದಿಂದ ಆಯ್ಕೆಗೊಂಡಿರುವ ಜಿಲ್ಲಾ ಪಂಚಾಯತ್,ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳು ಉಪಸ್ಥಿತರಿದ್ದರು.

ಜಿ.ಪಂ ಮಾಜಿ ಸದಸ್ಯ ಸುರೇಶ್ ಬಟವಾಡಿ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.ಸನ್ಮಾನ ಪತ್ರವನ್ನು ರಾಮಕ್ಷತ್ರೀಯ ಯುವಕ ಸಂಘ ಅಧ್ಯಕ್ಷ ರಾಘವೇಂದ್ರ ವಾಚಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು, ನಿವೃತ್ತ ಶಿಕ್ಷಕ ಗಣಪತಿ ಎಸ್ ಬಂಕೇಶ್ವರ ವಂದಿಸಿದ್ದರು.

See also  ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಎಎಪಿಯ ಅಚ್ಚರಿಯ ಫಲಿತಾಂಶ : ಸಿ.ಎ ರಮಾನಂದ ಪ್ರಭು ವಿಶ್ವಾಸ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು