ಕುಂದಾಪುರ: ರಾಮಕ್ಷತ್ರಿಯ ಸಮಾಜ ಸೀತಾರಾಮಚಂದ್ರ ದೇವಸ್ಥಾನ ಬೈಂದೂರು ವತಿಯಿಂದ ಬೈಂದೂರು ವಿಧಾನಸಭೆ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು ಬೈಂದೂರು ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಶಾಸಕ ಗುರುರಾಜ್ ಗಂಟಿಹೊಳೆ ಅಭಿನಂದನೆ ಸ್ವೀಕರಿಸಿ ಮಾತನಾಡಿ,ಚುನಾವಣೆಯ ಸಂದರ್ಭದಲ್ಲಿ ರಾಮಕ್ಷತ್ರೀಯ ಸಮಾಜ ನನ್ನ ಬೆಂಬಲಕ್ಕೆ ನಿಂತು ಪ್ರೀತಿಯಿಂದ ಕೈಹಿಡಿದು ಗೆಲ್ಲಿಸಿದ್ದೀರಿ,ನಿಮ್ಮೆಲ್ಲರ ಆರ್ಶೀವಾದದಿಂದ ಸಾಮಾನ್ಯ ಕಾರ್ಯಕರ್ತನಾದ ನಾನು ಶಾಸಕನಾಗಿ ನಿಮ್ಮೆದುರು ನಿಂತಿದ್ದೇನೆ.ರಾಮಕ್ಷತ್ರೀಯ ಸಮಾಜದ ನಿವೃತ್ತ ಅಧ್ಯಾಪಕರು ಹಾಗೂ ಮಾಜಿ ಶಾಸಕ ಕೆ ಲಕ್ಷ್ಮೀನಾರಾಯಣರವರ ಬೆಂಬಲವನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳುವುದು ಬಹಳ ಮುಖ್ಯ ಎಂದರು.
ಬೈಂದೂರು ರಾಮಕ್ಷತ್ರಿಯ ಸಮಾಜದ ಅಧ್ಯಕ್ಷ ರಾಮಕೃಷ್ಣ ಸಿ ಅಭಿನಂದನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಬೈಂದೂರು ಬಿ.ಜೆ.ಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ರಾಮಕ್ಷತ್ರಿಯ ಸಮಾಜದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು,ಸಮಾಜದ ಮುಖಂಡರು,ರಾಮಕ್ಷತ್ರಿಯ ಸಮಾಜದಿಂದ ಆಯ್ಕೆಗೊಂಡಿರುವ ಜಿಲ್ಲಾ ಪಂಚಾಯತ್,ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳು ಉಪಸ್ಥಿತರಿದ್ದರು.
ಜಿ.ಪಂ ಮಾಜಿ ಸದಸ್ಯ ಸುರೇಶ್ ಬಟವಾಡಿ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.ಸನ್ಮಾನ ಪತ್ರವನ್ನು ರಾಮಕ್ಷತ್ರೀಯ ಯುವಕ ಸಂಘ ಅಧ್ಯಕ್ಷ ರಾಘವೇಂದ್ರ ವಾಚಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು, ನಿವೃತ್ತ ಶಿಕ್ಷಕ ಗಣಪತಿ ಎಸ್ ಬಂಕೇಶ್ವರ ವಂದಿಸಿದ್ದರು.