News Karnataka Kannada
Tuesday, April 16 2024
Cricket
ಉಡುಪಿ

ಕಾಂಗ್ರೆಸ್ ನ ಅಪಪ್ರಚಾರಕ್ಕೆ ಕಾರ್ಕಳದಲ್ಲಿ ಸೋಲಾಗಿದೆ:  ಸುನಿಲ್ ಕುಮಾರ್

Congress's propaganda defeated in Karkala: Sunil Kumar
Photo Credit : News Kannada

ಕಾರ್ಕಳ: ಕಳೆದ ಎರಡ್ಮೂರು ತಿಂಗಳಿನಿಂದ ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಅದರ ಬಿ ಟೀಮ್ ದೊಡ್ಡ ಪ್ರಮಾಣದಲ್ಲಿ ಅಪಪ್ರಚಾರ ನಡೆಸುವಲ್ಲಿ ಯಶಸ್ಸು ಕಂಡಿತ್ತು. ಅದರ ನಡುವೆಯೂ ಅಭಿವೃದ್ಧಿಯನ್ನು ಗೆಲ್ಲಿಸಬೇಕೆಂದು ಕ್ಷೇತ್ರದ ಮತದಾರರು ಮನಗಂಡು ಬಿಜೆಪಿಯನ್ನು ಮತ್ತೊಮ್ಮೆ ಗೆಲ್ಲಿಸಿದ್ದಾರೆ ಎಂದು ಕಾರ್ಕಳ‌ ಬಿಜೆಪಿ‌ ಅಭ್ಯರ್ಥಿ‌ ಸುನಿಲ್ ಕುಮಾರ್ ಹೇಳಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಗೆಲ್ಲಿಸಿದಕ್ಕೆ ಕಾರ್ಕಳ ಕ್ಷೇತ್ರದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಯಾವ ವಿಶ್ವಾಸ, ನಂಬಿಕೆಯಿಂದ ಕಾರ್ಕಳ ಜನತೆ ನನ್ನನ್ನು ನಾಲ್ಕನೇ ಬಾರಿ ಗೆಲ್ಲಿಸಿದ್ದಾರೋ ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಈ ಗೆಲುವು ಕಾರ್ಯಕರ್ತರ ಗೆಲುವು. ಅಪಪ್ರಚಾರದ ಮಧ್ಯೆ ಜನರಿಗೆ ಸತ್ಯವನ್ನು ತಿಳಿಸಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು