ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ.
ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4 ರ ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು. ಭಾನುವಾರ ಸುರಿದ ಮಳೆಯಿಂದಾಗಿ ವಾಹನ ವಾಹನ ನಿಯಂತ್ತಣಕ್ಕೆ ಸಿಗದೇ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿ ಪೈಲೆಟ್ ನಾಗರಾಜ್ ಮತ್ತು ಸಿಬ್ಬಂದಿ ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.