News Karnataka Kannada
Saturday, April 20 2024
Cricket
ಉಡುಪಿ

ಮೀನುಗಾರರ ಹಕ್ಕು ಪತ್ರಕ್ಕೆ ರಿಯಾಯಿತಿ ದರ ನಿಗದಿಗೊಳಿಸಿ: ಕೃಷ್ಣ ಭೈರೇಗೌಡರಿಗೆ ಕೊಡ್ಗಿ ಮನವಿ

Kodgi urges Krishna Byre Gowda to fix concessional rate for poor fishermen's title deeds
Photo Credit : News Kannada

ಉಡುಪಿ: ಜಿಲ್ಲೆ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಡಿ ಕನ್ಯಾಣ ಗ್ರಾಮ ಪಂಚಾಯತ್ ಕೋಡಿ ಗ್ರಾಮದ ಮೀನುಗಾರರ ಹಕ್ಕು ಪತ್ರಕ್ಕೆ ನಿಗದಿಗೊಳಿಸಿದ ದರವನ್ನು ರಿಯಾಯಿತಿಗೊಳಿಸಿ ಹಕ್ಕು ಪತ್ರ ನೀಡಲು ಶಾಸಕ ಕಿರಣ್ ಕೊಡ್ಗಿ ಅವರು ಕಂದಾಯ ಸಚಿವ ಕೃಷ್ಣ ಭೈರೇಗೌಡರನ್ನು ವಿಕಾಸ ಸೌಧದಲ್ಲಿ ಭೇಟಿಯಾಗಿ ಮನವಿ ನೀಡಿದರು.

ಸುಮಾರು 400ಕ್ಕೂ ಮಿಕ್ಕಿ ಅರ್ಜಿದಾರರ ಪೈಕಿ ಈಗಾಗಲೇ ಹಲವರಿಗೆ ಮಂಜೂರಾತಿ ನೀಡಲಾಗಿದ್ದು, ಕಂದಾಯ ಇಲಾಖೆ ನಿಗದಿಕರಿಸಿದ ಮೊತ್ತ ಪಾವತಿಸಲು ಬಡವರಿಗೆ ಕಷ್ಟ ಆದ್ದರಿಂದ, ಮಲ್ಪೆ ಪಡುಕರೆಯ ಕೊಳ ಗ್ರಾಮದಲ್ಲಿ ನೀಡಿರುವ ರಿಯಾಯಿತಿ ದರದ ಮಾದರಿಯಲ್ಲಿ ಕೋಡಿ ಗ್ರಾಮದ ಮೀನುಗಾರರಿಗೆ ಹಣ ಪಾವತಿಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಕೊಡ್ಗಿ ಕಂದಾಯ ಸಚಿವರಿಗೆ ಮನವಿ ಮಾಡಿದರು.

ಹಿಂದಿನ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಇಲಾಖೆಯ ಮುಂದೆ ಮಂಡಿಸಿದ ಮಾಹಿತಿಗಳನ್ನು ಸಚಿವರಿಗೆ ನೀಡಿದ ಕೊಡ್ಗಿ ಅವರು ಬಹುಬೇಗ ದರ ರಿಯಾಯಿತಿ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ. ಶಾಸಕ ಕಿರಣ್ ಕೊಡ್ಗಿ ಅವರೊಂದಿಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು