ಕುಂದಾಪುರ: ಗಂಗೊಳ್ಳಿಯಲ್ಲಿ ಆವರಣವಿಲ್ಲದ ಪಾಳು ಬಿದ್ದ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಗೂಳಿಯನ್ನು ಅಗ್ನಿ ಶಾಮಕದಳ ಸಿಬ್ಬಂದಿ ಮತ್ತು ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳ ಸಹಯೋಗದೊಂದಿಗೆ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಮತ್ತು ಸ್ಥಳೀಯ ಮುಸ್ಲಿಂ ಯುವಕರ ನೆರವಿನೊಂದಿಗೆ ರಕ್ಷಿಸಿದ ಘಟನೆ ಶುಕ್ರವಾರ ನಡೆದಿದೆ.
ಕಾರ್ಯಾಚರಣೆಯಲ್ಲಿ ಬೈಂದೂರು ಅಗ್ನಿಶಾಮಕ ದಳ ಸಿಬ್ಬಂದಿಗಳು,ಗಂಗೊಳ್ಳಿ ಪೆÇಲೀಸ್ ಠಾಣೆಯ ಪಿಎಸ್ಐ ವಿನಯ್ ಮತ್ತು ಸಿಬ್ಬಂದಿಗಳು, ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಹಾಗೂ ಸ್ಥಳೀಯ ಮುಸ್ಲಿಂ ಯುವಕರು ಭಾಗವಹಿಸಿದ್ದರು. ಬಾವಿಗೆ ಬಿದ್ದ ಗೂಳಿಯನ್ನು ಕ್ರೇನ್ ಯಂತ್ರದ ಸಾಹಯದ ಮೂಲಕ ಮೇಲ್ಲಕ್ಕೆ ಎತ್ತಲಾಯಿತು.