News Karnataka Kannada
Tuesday, April 23 2024
Cricket
ಉಡುಪಿ

ಕುಂದಾಪುರ: ವಾಹನ ತಪಾಸಣೆ ಸಮಯದಲ್ಲಿ ಪೊಲೀಸರ ಮೇಲೆ ಬೈಕ್ ಹತ್ತಿಸಲು ಯತ್ನ, ಮುಂದೇನಾಯ್ತು ಗೊತ್ತಾ

An attempt was made to get a bike on the cops during vehicle checking
Photo Credit : News Kannada

ಕುಂದಾಪುರ: ರಾಷ್ರೀಯ ಹೆದ್ದಾರಿ 66 ರಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರ ಮೇಲೆ ದ್ವಿಚಕ್ರ ವಾಹನವನ್ನು ಡಿಕ್ಕಿ ಹೊಡೆಸಲಯ ಯತ್ನಿಸಿ ಬೈಕ್ ನೊಂದಿಗೆ ಪರಾರಿಯಾದ ಘಟನೆ ಸಾಲಿಗ್ರಾಮದಲ್ಲಿ ಬುಧವಾರ ನಡೆದಿದೆ.

ಕೋಟ ಠಾಣೆಯ ಪಿಎಸ್‍ಐ ನರೇಂದ್ರ ಅವರು ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಸಾಲಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಬ್ಬಂದಿಗಳೊಂದಿಗೆ ವಾಹನಗಳನ್ನು ತಪಾಸಣೆ ನಡೆಸುವ ಕಾರ್ಯಾಚರಣೆಯನ್ನು ಮಾಡುತ್ತಿದ್ದರು.ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಬರುತ್ತಿದ್ದ ಬೈಕ್‍ಗೆ ಪೊಲೀಸರು ನಿಲ್ಲಿಸುವ ಸೂಚನೆಯನ್ನು ನೀಡಿದ್ದರೂ ಕೂಡ ಬೈಕ್ ಸವಾರರು ಬೈಕ್ ನಿಲ್ಲಿಸದೆ ಪೊಲೀಸರ ಮೈ ಮೇಲೆ ಎರಗಿ ಬಂದಿದ್ದಾರೆ.

ಕೂದಲೆಳೆಯ ಅಂತರದಲ್ಲಿ ಪೊಲೀಸರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಕೆ.ಎ 20 ವಿ 9992 ನೋಂದಣಿ ಸಂಖ್ಯೆಯನ್ನು ಹೊಂದಿರುವ ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು