ಕುಂದಾಪುರ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುವುದಾಗಿ ಪ್ರಣಾಳಿಕೆಯನ್ನು ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ ಎಡವಟ್ಟು ಮಾಡಿಕೊಂಡಿದೆ. ಹಿಂದೂ ಸಂಘಟನೆಯ ನಿಷೇಧ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಪಕ್ಷದ ಮೇಲೆ ಕೆಂಡ ಕಾರಿರುವ ಬಿಜೆಪಿ ಪಕ್ಷದ ನಾಯಕರು, ಬಜರಂಗದಳ ನಿಷೇಧದ ಮಾತನ್ನು ಚುನಾವಣಾ ಕಣಕ್ಕೆ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಂಡಿದ್ದಾರೆ.
ಬೈಂದೂರು ತಾಲೂಕಿನ ಗುಜ್ಜಾಡಿಯಲ್ಲಿ ಕಾಂಗ್ರೆಸ್ ಸೇರಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳೀಯ ಬಿಜೆಪಿ ನಾಯಕರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಚುನಾವಣೆಗೆ ಕೆಲವೇ ಕೆಲವು ದಿನಗಳು ಬಾಕಿ ಇರುವ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪಕ್ಷದ ಧ್ವಜ ನೀಡಿ ಹಿಂದೂ ಕಾರ್ಯಕರ್ತರನ್ನು ಬರಮಾಡಿಕೊಂಡರು.ಸ್ಥಳೀಯ ಬಿಜೆಪಿ ಪಕ್ಷದ ನಾಯಕರಾದ ವಿನೋದ್ ಭಂಡಾರಿ ಹಾಗೂ ಹರೀಶ್ಮ ಮೇಸ್ತ ಗುಜ್ಜಾಡಿ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಉಮೇಶ್ ಮೇಸ್ತ, ದತ್ತಾತ್ರೇಯ ಖಾರ್ವಿ,ಪುಂಡಲಿಕ ಮಂಕಿ, ಸೋಮನಾಥ್ ಮೇಸ್ತ, ದೇವದಾಸ್ ಖಾರ್ವಿ ಗುಜ್ಜಾಡಿ ಗ್ರಾಮದ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.