News Kannada
Sunday, June 04 2023
ಉಡುಪಿ

ಕುಂದಾಪುರ: ಸಂಘಟನಾತ್ಮಕ ಶಕ್ತಿಯಿಂದ ಬೆಜೆಪಿಗೆ ಗೆಲುವು

Kundapur: BJP wins with organisational strength
Photo Credit : News Kannada

ಕುಂದಾಪುರ: ಉಡುಪಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬದಲಾಯಿಸುವ ಮೂಲಕ ಹೊಸ ಪ್ರಯೋಗ ನಡೆಸಿದೆ,ಇಂತಹ ಹೊಸ ಪ್ರಯೋಗ ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ,ಕಾರ್ಯಕರ್ತರ ಸಂಘಟನಾತ್ಮಕ ಶಕ್ತಿಯಿಂದ ಜಿಲ್ಲೆಯ ಐದು ಕ್ಷೇತ್ರಗಳಲ್ಲಿಯೂ ಬಿಜೆಪಿ ಸುಲಭ ಜಯ ಸಾಧಿಸಲಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಬಿಜೆಪಿ ಎಲ್ಲಾ ವರ್ಗದ ಜನರಿಗೂ ಅದರಲ್ಲಿಯೂ ವಿಶೇಷ ಮೀನುಗಾರರ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಮಾಡಿದೆ,ನಾಡದೋಣಿ ಮೀನುಗಾರರಿಗೆ ಸಮರ್ಪಕ ಸೀಮೆಎಣ್ಣೆ ವಿತರಿಸಿರುವುದಲ್ಲದೇ,ಡೀಸೆಲ್ ಸಬ್ಸಿಡಿಯನ್ನು 2ಲಕ್ಷ ಕೆ.ಎಲ್‍ಗೆ ಹೆಚ್ಚಿಸಿದೆ ಎಂದ ಅವರು ಮರವಂತೆ ಹೊರ ಬಂದರು ಕಾಮಗಾರಿಯ ಆರಂಭಿಕ ನಕ್ಷೆಯೆ ಅವೈಜ್ಞಾನಿಕವಾಗಿದ್ದು,ಬಂದರು ಅಭಿವೃದ್ಧಿ ಕಾಮಗಾರಿಗೆ ಅನುದಾನ ಮಂಜೂರಾದರು ಕಾಮಗಾರಿ ನಡೆಸದ ಬಗ್ಗೆ ಅಧಿಕಾರಿಗಳ ಮೂಲಕ ಮಾಹಿತಿ ಪಡೆಯಲಾಗುವುದು ಎಂದರು.

ಶಾಸಕ ಸುಕುಮಾರ ಶೆಟ್ಟಿ ಯವರು ಪ್ರಚಾರಕ್ಕೆ ಬಾರದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಶಾಸಕರಿಗೆ ಗುರುರಾಜ ಗಂಟಿಹೊಳೆ ಪರ ಅಭಿಮಾನವಿದ್ದು ಶೀಘ್ರ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮೋದ್ ಮಧ್ವರಾಜ್ ಬಿಜೆಪಿ ಪಕ್ಷದಲ್ಲಿ ಗಾಳ ಹಾಕುತ್ತಾ ಕುಳಿತ್ತಿದ್ದಾರೆ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ ಲೂಟಿ ಮಾಡಿ ಸಾಮ್ರಾಜ್ಯ ಕಟ್ಟುವುದಕ್ಕಿಂತ ಗಾಳ ಹಾಕಿ ಮೀನು ಹಿಡಿಯುವುದೇ ಶ್ರೇಷ್ಟ ಕಾಯಕ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು,ಶೋಭಾ ಪುತ್ರನ್,ಶಿರೂರು ಶಕ್ತಿ ಕೇಂದ್ರದ ಅಧ್ಯಕ್ಷ ಜಗ್ನನಾಥ ಮೊಗವೀರ, ತಾ.ಪಂ ಮಾಜಿ ಉಪಾಧ್ಯಕ್ಷೆ ಮಾಲಿನಿ .ಕೆ,ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ,ಗೋಪಾಲ ಕಾಂಚನ್,ಅನಿತಾ ಆರ್.ಕೆ,ತಾ.ಪಂ ಮಾಜಿ ಸದಸ್ಯೆ ಶ್ಯಾಮಲ ಕುಂದರ್,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ,ಭಾಗೀರಥಿ ಸುರೇಶ್,ಬೈಂದೂರು ಮಾಧ್ಯಮ ಸಂಚಾಲಕ ಗಣೇಶ ಗಾಣಿಗ ಉಪ್ಪುಂದ ಉಪಸ್ಥಿತರಿದ್ದರು.

See also  ಕುಂದಾಪುರ: ಭಾಗಿಮನೆ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು