ಕುಂದಾಪುರ: ಬೈಂದೂರು ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಮುಖರು, ಉದ್ಯಮಿಗಳು, ಬಾಬು ಹೆಗ್ಡೆ ಬೆಂಬಲಿಗರು, ಅಣ್ಣಪ್ಪ ಶೆಟ್ಟಿ ಮತ್ತು ಜೆಸಿಐ ಉಪ್ಪುಂದ ಕೀರ್ತಿರಾಜ್ ಶೆಟ್ಟಿ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಮಾಜಿ ಶಾಸಕರಾದ ಬೈಂದೂರು ಕ್ಷೇತ್ರದ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಅವರ ಮೇಲಿನ ಅಭಿಮಾನದಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಪ್ರಕಾಶ್ವಂದ್ರ ಶೆಟ್ಟಿ ಹಾಗೂ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.
ಬೈಂದೂರು ಭಾಗದಲ್ಲಿ ಪ್ರಬಲ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ ಆಗಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆಬಲ ಬಂದಿದ್ದು ಕೆ.ಗೋಕೆ.ಗೋಪಾಲ ಪೂಜಾರಿ ಅವರ ಗೆಲುವಿನ ರಹದಾರಿ ಸುಗಮವಾಗಲಿದೆ ಎನ್ನಲಾಗುತ್ತಿದೆ.