ಕುಂದಾಪುರ: ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಮೆಟ್ಟಿನಹೊಳೆ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ರಜಾ ದಿನಗಳನ್ನು ಮುಗಿಸಿಕೊಂಡು ಬಂದ ಮುದ್ದು ಪುಟಾಣಿಗಳಿಗೆ ಬಲೂನು ಹಾಗೂ ಪುಷ್ಪವನ್ನು ನೀಡಿ ಆರತಿ ಬೆಳಗುವುದರ ಮೂಲಕ ಶಾಲೆಗೆ ಬರಮಾಡಿಕೊಳ್ಳಲಾಯಿತು. ನಂತರ ನಡೆದ ಪೋಷಕರ ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸೀತಾರಾಮ ಕುಲಾಲ್ ವಹಿಸಿದ್ದರು.ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಲಲಿತಾ ಪೂಜಾರಿ ಬಾಳೆಗದ್ದೆ,ಕರಾವಳಿ ಕುಲಾಲರ ಯುವ ವೇದಿಕೆಯ ಉಪಾಧ್ಯಕ್ಷಭಾಸ್ಕರ್ ಕುಲಾಲ, ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ ದೇವಾಡಿಗ, ನಿವೃತ್ತ ಮುಖ್ಯೋಪಾಧ್ಯಾಯರಾದ ಸುಬ್ಬ ದೇವಾಡಿಗ ಉಪಸ್ಥಿತರಿದ್ದರು.
ಇಲಾಖೆಯ ವತಿಯಿಂದ ನೀಡಲಾದ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸೀತಾರಾಮ ಕುಲಾಲರು ಕೊಡಮಾಡಿದ ಸುಮಾರು 35000 ರೂ. ವೆಚ್ಚದ ನೋಟ್ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಯಿತು.
ಶಾಲಾ ಶಿಕ್ಷಕ ತಾಜುದ್ದೀನ್ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಮಂಜುನಾಥ ದೇವಾಡಿಗ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರತಿಮಾ. ಜಿ. ಕಾರ್ಯಕ್ರಮ ನಿರೂಪಿಸಿದರು. ಅಭಿಲಾಷ ಶೆಟ್ಟಿ ವಂದಿಸಿದರು.